Categories: ಕೋಲಾರ

ಅ.23ರಂದು ಹೊಳಲಿ ಬಳಿ ಕ್ರಿಕೆಟ್ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ

ಕೋಲಾರ: ಜಿಲ್ಲೆಯಲ್ಲಿ ಕ್ರಿಕೆಟ್‌ ಪ್ರೇಮಿಗಳಿಗೆ ಬಹುದಿನಗಳ ಬೇಡಿಕೆಯಾದ ಕ್ರೀಡಾಂಗಣಕ್ಕೆ ಅ.23 ರಂದು ಬುಧವಾರ ತಾಲೂಕಿನ ಹೊಳಲಿ ಗ್ರಾಮದ ಬಳಿ ಗುದ್ದಲಿ ಪೂಜೆ ನಡೆಯಲಿದ್ದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಭಾಗವಹಿಸಲಿದ್ದು ಈ ಕಾರ್ಯಕ್ರಮಕ್ಕೆ ಕ್ರಿಕೆಟ್ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕ್ರೀಡಾಪಟು ಓಂಶಕ್ತಿ ಚಲಪತಿ ತಿಳಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕ್ರಿಕೆಟ್ ಕ್ರೀಡಾಂಗಣವಾದರೆ ಸ್ಥಳೀಯ ಪ್ರತಿಭೆಗಳಿಗೂ ಸಹ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಅವಕಾಶಗಳು ಸಿಗಲಿವೆ ಇದಕ್ಕೆ ಈಗಾಗಲೇ ಜಿಲ್ಲಾಡಳಿತವು ೧೬ ಎಕರೆಯನ್ನು ಮಂಜೂರು ಮಾಡಲಾಗಿದೆ ಇನ್ನೂ ೧೨ ಎಕರೆ ಅವಶ್ಯಕತೆ ಇದ್ದು ಸರಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ ಇದಕ್ಕೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಜನಪ್ರತಿನಿಧಿಗಳ ಸಹಕಾರವಿದೆ ಎಂದರು.

ಈ ವೇದಿಕೆಯಲ್ಲಿ ಇರುವವರು ಸುಮಾರು 35 ವರ್ಷಗಳಿಂದ ಕ್ರಿಕೆಟ್ ಆಡಿಕೊಂಡು ಬಂದಿದ್ದೇವೆ ಆಗಿನಿಂದ ಕ್ರಿಕೆಟ್ ಮೈದಾನದ ಕನಸಾಗಿದೆ ನಮಗೆ ಸಿಗದ ಅವಕಾಶವು ಮುಂದಿನ ಪೀಳಿಗೆಗೆ ಆದರೂ ಸಿಗಲಿ ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಯ ಸಮನ್ವಯ ಸದಸ್ಯ ಆಯಿಲ್ ರಮೇಶ್ ಮಾತನಾಡಿ ಈ ಕ್ರೀಡಾಂಗಣಕ್ಕೆ ಬಹಳ ವರ್ಷಗಳಿಂದ ಹೋರಾಟ ನಡೆಸಿದ್ದೇವೆ ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿವೆ ಅವಕಾಶ ಸಿಗಬೇಕು‌ ಹೀಗಾಗಿಯೇ ಎಲ್ಲಾ ಜಿಲ್ಲೆಗಳಲ್ಲಿ ಕ್ರೀಡಾಂಗಣ ನಿರ್ಮಿಸಬೇಕು ಈಗಾಗಲೇ ಸುಮಾರು 8 ಜಿಲ್ಲೆಗಳಲ್ಲಿ ಅಂತಹ ಪ್ರಯತ್ನಗಳು ನಡೆದಿವೆ ಎಂದರು.

ಕೋಲಾರದಲ್ಲಿ ಪ್ರಾರಂಭವಾಗಲಿರುವ ಕ್ರೀಡಾಂಗಣದಲ್ಲಿ ನಾಲ್ಕು ಮೈದಾನಗಳು ಇದ್ದು ಇಲ್ಲಿಯೇ ಲೀಗ್ ಟೂರ್ನಿ ಸಹ ನಡೆಯಲಿದೆ ನಾವು ಹಿಂದೆ ಅನುಭವಿಸಿದ ಕಷ್ಟ ಗೊತ್ತಿದೆ ಅಂತರರಾಷ್ಟ್ರೀಯ ದರ್ಜೆಯ ಸೌಲಭ್ಯ ಸಿಗಬೇಕು ಜೊತೆಗೆ ಆಸಕ್ತರಿಗೆ ಅಭ್ಯಾಸ ನಡೆಸಲು ಅನುಕೂಲವಾಗುವಂತೆ ಮಾಡಲಾಗುತ್ತದೆ ಎಲ್ಲಾ ಉಚಿತವಿರಲಿದ್ದು ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳು ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.

ಈ ಸಂದರ್ಭದಲ್ಲಿ ಕೆಸಿಎ ಸದಸ್ಯ ವಿಜಯ ಸಾಗರ್ ಶೆಟ್ಟಿ,‌ ಕ್ರೀಡಾಪಟುಗಳಾದ ಪುಟ್ಟಸ್ವಾಮಿ, ರಘುರಾಮ್ ಅಡಿಗ, ಕಿಟ್ಟಿ, ಪ್ರಸನ್ನ, ಶಿವು, ಚಂದ್ರಶೇಖರ್, ಉಲ್ಲಾಸ್, ಮಂಜುನಾಥ್ ಹಾಗೂ ಕ್ರಿಕೆಟಿಗರು ಇದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

9 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

18 hours ago