Categories: ಕೋಲಾರ

ಅ.23ರಂದು ಹೊಳಲಿ ಬಳಿ ಕ್ರಿಕೆಟ್ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ

ಕೋಲಾರ: ಜಿಲ್ಲೆಯಲ್ಲಿ ಕ್ರಿಕೆಟ್‌ ಪ್ರೇಮಿಗಳಿಗೆ ಬಹುದಿನಗಳ ಬೇಡಿಕೆಯಾದ ಕ್ರೀಡಾಂಗಣಕ್ಕೆ ಅ.23 ರಂದು ಬುಧವಾರ ತಾಲೂಕಿನ ಹೊಳಲಿ ಗ್ರಾಮದ ಬಳಿ ಗುದ್ದಲಿ ಪೂಜೆ ನಡೆಯಲಿದ್ದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಭಾಗವಹಿಸಲಿದ್ದು ಈ ಕಾರ್ಯಕ್ರಮಕ್ಕೆ ಕ್ರಿಕೆಟ್ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕ್ರೀಡಾಪಟು ಓಂಶಕ್ತಿ ಚಲಪತಿ ತಿಳಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕ್ರಿಕೆಟ್ ಕ್ರೀಡಾಂಗಣವಾದರೆ ಸ್ಥಳೀಯ ಪ್ರತಿಭೆಗಳಿಗೂ ಸಹ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಅವಕಾಶಗಳು ಸಿಗಲಿವೆ ಇದಕ್ಕೆ ಈಗಾಗಲೇ ಜಿಲ್ಲಾಡಳಿತವು ೧೬ ಎಕರೆಯನ್ನು ಮಂಜೂರು ಮಾಡಲಾಗಿದೆ ಇನ್ನೂ ೧೨ ಎಕರೆ ಅವಶ್ಯಕತೆ ಇದ್ದು ಸರಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ ಇದಕ್ಕೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಜನಪ್ರತಿನಿಧಿಗಳ ಸಹಕಾರವಿದೆ ಎಂದರು.

ಈ ವೇದಿಕೆಯಲ್ಲಿ ಇರುವವರು ಸುಮಾರು 35 ವರ್ಷಗಳಿಂದ ಕ್ರಿಕೆಟ್ ಆಡಿಕೊಂಡು ಬಂದಿದ್ದೇವೆ ಆಗಿನಿಂದ ಕ್ರಿಕೆಟ್ ಮೈದಾನದ ಕನಸಾಗಿದೆ ನಮಗೆ ಸಿಗದ ಅವಕಾಶವು ಮುಂದಿನ ಪೀಳಿಗೆಗೆ ಆದರೂ ಸಿಗಲಿ ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಯ ಸಮನ್ವಯ ಸದಸ್ಯ ಆಯಿಲ್ ರಮೇಶ್ ಮಾತನಾಡಿ ಈ ಕ್ರೀಡಾಂಗಣಕ್ಕೆ ಬಹಳ ವರ್ಷಗಳಿಂದ ಹೋರಾಟ ನಡೆಸಿದ್ದೇವೆ ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿವೆ ಅವಕಾಶ ಸಿಗಬೇಕು‌ ಹೀಗಾಗಿಯೇ ಎಲ್ಲಾ ಜಿಲ್ಲೆಗಳಲ್ಲಿ ಕ್ರೀಡಾಂಗಣ ನಿರ್ಮಿಸಬೇಕು ಈಗಾಗಲೇ ಸುಮಾರು 8 ಜಿಲ್ಲೆಗಳಲ್ಲಿ ಅಂತಹ ಪ್ರಯತ್ನಗಳು ನಡೆದಿವೆ ಎಂದರು.

ಕೋಲಾರದಲ್ಲಿ ಪ್ರಾರಂಭವಾಗಲಿರುವ ಕ್ರೀಡಾಂಗಣದಲ್ಲಿ ನಾಲ್ಕು ಮೈದಾನಗಳು ಇದ್ದು ಇಲ್ಲಿಯೇ ಲೀಗ್ ಟೂರ್ನಿ ಸಹ ನಡೆಯಲಿದೆ ನಾವು ಹಿಂದೆ ಅನುಭವಿಸಿದ ಕಷ್ಟ ಗೊತ್ತಿದೆ ಅಂತರರಾಷ್ಟ್ರೀಯ ದರ್ಜೆಯ ಸೌಲಭ್ಯ ಸಿಗಬೇಕು ಜೊತೆಗೆ ಆಸಕ್ತರಿಗೆ ಅಭ್ಯಾಸ ನಡೆಸಲು ಅನುಕೂಲವಾಗುವಂತೆ ಮಾಡಲಾಗುತ್ತದೆ ಎಲ್ಲಾ ಉಚಿತವಿರಲಿದ್ದು ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳು ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.

ಈ ಸಂದರ್ಭದಲ್ಲಿ ಕೆಸಿಎ ಸದಸ್ಯ ವಿಜಯ ಸಾಗರ್ ಶೆಟ್ಟಿ,‌ ಕ್ರೀಡಾಪಟುಗಳಾದ ಪುಟ್ಟಸ್ವಾಮಿ, ರಘುರಾಮ್ ಅಡಿಗ, ಕಿಟ್ಟಿ, ಪ್ರಸನ್ನ, ಶಿವು, ಚಂದ್ರಶೇಖರ್, ಉಲ್ಲಾಸ್, ಮಂಜುನಾಥ್ ಹಾಗೂ ಕ್ರಿಕೆಟಿಗರು ಇದ್ದರು.

Ramesh Babu

Journalist

Recent Posts

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

2 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

23 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago