ಕೋಲಾರ: ಜಿಲ್ಲೆಯಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಬಹುದಿನಗಳ ಬೇಡಿಕೆಯಾದ ಕ್ರೀಡಾಂಗಣಕ್ಕೆ ಅ.23 ರಂದು ಬುಧವಾರ ತಾಲೂಕಿನ ಹೊಳಲಿ ಗ್ರಾಮದ ಬಳಿ ಗುದ್ದಲಿ ಪೂಜೆ ನಡೆಯಲಿದ್ದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಭಾಗವಹಿಸಲಿದ್ದು ಈ ಕಾರ್ಯಕ್ರಮಕ್ಕೆ ಕ್ರಿಕೆಟ್ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕ್ರೀಡಾಪಟು ಓಂಶಕ್ತಿ ಚಲಪತಿ ತಿಳಿಸಿದರು,
ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕ್ರಿಕೆಟ್ ಕ್ರೀಡಾಂಗಣವಾದರೆ ಸ್ಥಳೀಯ ಪ್ರತಿಭೆಗಳಿಗೂ ಸಹ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಅವಕಾಶಗಳು ಸಿಗಲಿವೆ ಇದಕ್ಕೆ ಈಗಾಗಲೇ ಜಿಲ್ಲಾಡಳಿತವು ೧೬ ಎಕರೆಯನ್ನು ಮಂಜೂರು ಮಾಡಲಾಗಿದೆ ಇನ್ನೂ ೧೨ ಎಕರೆ ಅವಶ್ಯಕತೆ ಇದ್ದು ಸರಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ ಇದಕ್ಕೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಜನಪ್ರತಿನಿಧಿಗಳ ಸಹಕಾರವಿದೆ ಎಂದರು.
ಈ ವೇದಿಕೆಯಲ್ಲಿ ಇರುವವರು ಸುಮಾರು 35 ವರ್ಷಗಳಿಂದ ಕ್ರಿಕೆಟ್ ಆಡಿಕೊಂಡು ಬಂದಿದ್ದೇವೆ ಆಗಿನಿಂದ ಕ್ರಿಕೆಟ್ ಮೈದಾನದ ಕನಸಾಗಿದೆ ನಮಗೆ ಸಿಗದ ಅವಕಾಶವು ಮುಂದಿನ ಪೀಳಿಗೆಗೆ ಆದರೂ ಸಿಗಲಿ ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಯ ಸಮನ್ವಯ ಸದಸ್ಯ ಆಯಿಲ್ ರಮೇಶ್ ಮಾತನಾಡಿ ಈ ಕ್ರೀಡಾಂಗಣಕ್ಕೆ ಬಹಳ ವರ್ಷಗಳಿಂದ ಹೋರಾಟ ನಡೆಸಿದ್ದೇವೆ ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿವೆ ಅವಕಾಶ ಸಿಗಬೇಕು ಹೀಗಾಗಿಯೇ ಎಲ್ಲಾ ಜಿಲ್ಲೆಗಳಲ್ಲಿ ಕ್ರೀಡಾಂಗಣ ನಿರ್ಮಿಸಬೇಕು ಈಗಾಗಲೇ ಸುಮಾರು 8 ಜಿಲ್ಲೆಗಳಲ್ಲಿ ಅಂತಹ ಪ್ರಯತ್ನಗಳು ನಡೆದಿವೆ ಎಂದರು.
ಕೋಲಾರದಲ್ಲಿ ಪ್ರಾರಂಭವಾಗಲಿರುವ ಕ್ರೀಡಾಂಗಣದಲ್ಲಿ ನಾಲ್ಕು ಮೈದಾನಗಳು ಇದ್ದು ಇಲ್ಲಿಯೇ ಲೀಗ್ ಟೂರ್ನಿ ಸಹ ನಡೆಯಲಿದೆ ನಾವು ಹಿಂದೆ ಅನುಭವಿಸಿದ ಕಷ್ಟ ಗೊತ್ತಿದೆ ಅಂತರರಾಷ್ಟ್ರೀಯ ದರ್ಜೆಯ ಸೌಲಭ್ಯ ಸಿಗಬೇಕು ಜೊತೆಗೆ ಆಸಕ್ತರಿಗೆ ಅಭ್ಯಾಸ ನಡೆಸಲು ಅನುಕೂಲವಾಗುವಂತೆ ಮಾಡಲಾಗುತ್ತದೆ ಎಲ್ಲಾ ಉಚಿತವಿರಲಿದ್ದು ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳು ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.
ಈ ಸಂದರ್ಭದಲ್ಲಿ ಕೆಸಿಎ ಸದಸ್ಯ ವಿಜಯ ಸಾಗರ್ ಶೆಟ್ಟಿ, ಕ್ರೀಡಾಪಟುಗಳಾದ ಪುಟ್ಟಸ್ವಾಮಿ, ರಘುರಾಮ್ ಅಡಿಗ, ಕಿಟ್ಟಿ, ಪ್ರಸನ್ನ, ಶಿವು, ಚಂದ್ರಶೇಖರ್, ಉಲ್ಲಾಸ್, ಮಂಜುನಾಥ್ ಹಾಗೂ ಕ್ರಿಕೆಟಿಗರು ಇದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…