Categories: ಕೋಲಾರ

ಅ.23ರಂದು ಹೊಳಲಿ ಬಳಿ ಕ್ರಿಕೆಟ್ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ

ಕೋಲಾರ: ಜಿಲ್ಲೆಯಲ್ಲಿ ಕ್ರಿಕೆಟ್‌ ಪ್ರೇಮಿಗಳಿಗೆ ಬಹುದಿನಗಳ ಬೇಡಿಕೆಯಾದ ಕ್ರೀಡಾಂಗಣಕ್ಕೆ ಅ.23 ರಂದು ಬುಧವಾರ ತಾಲೂಕಿನ ಹೊಳಲಿ ಗ್ರಾಮದ ಬಳಿ ಗುದ್ದಲಿ ಪೂಜೆ ನಡೆಯಲಿದ್ದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಭಾಗವಹಿಸಲಿದ್ದು ಈ ಕಾರ್ಯಕ್ರಮಕ್ಕೆ ಕ್ರಿಕೆಟ್ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕ್ರೀಡಾಪಟು ಓಂಶಕ್ತಿ ಚಲಪತಿ ತಿಳಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕ್ರಿಕೆಟ್ ಕ್ರೀಡಾಂಗಣವಾದರೆ ಸ್ಥಳೀಯ ಪ್ರತಿಭೆಗಳಿಗೂ ಸಹ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಅವಕಾಶಗಳು ಸಿಗಲಿವೆ ಇದಕ್ಕೆ ಈಗಾಗಲೇ ಜಿಲ್ಲಾಡಳಿತವು ೧೬ ಎಕರೆಯನ್ನು ಮಂಜೂರು ಮಾಡಲಾಗಿದೆ ಇನ್ನೂ ೧೨ ಎಕರೆ ಅವಶ್ಯಕತೆ ಇದ್ದು ಸರಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ ಇದಕ್ಕೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಜನಪ್ರತಿನಿಧಿಗಳ ಸಹಕಾರವಿದೆ ಎಂದರು.

ಈ ವೇದಿಕೆಯಲ್ಲಿ ಇರುವವರು ಸುಮಾರು 35 ವರ್ಷಗಳಿಂದ ಕ್ರಿಕೆಟ್ ಆಡಿಕೊಂಡು ಬಂದಿದ್ದೇವೆ ಆಗಿನಿಂದ ಕ್ರಿಕೆಟ್ ಮೈದಾನದ ಕನಸಾಗಿದೆ ನಮಗೆ ಸಿಗದ ಅವಕಾಶವು ಮುಂದಿನ ಪೀಳಿಗೆಗೆ ಆದರೂ ಸಿಗಲಿ ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಯ ಸಮನ್ವಯ ಸದಸ್ಯ ಆಯಿಲ್ ರಮೇಶ್ ಮಾತನಾಡಿ ಈ ಕ್ರೀಡಾಂಗಣಕ್ಕೆ ಬಹಳ ವರ್ಷಗಳಿಂದ ಹೋರಾಟ ನಡೆಸಿದ್ದೇವೆ ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿವೆ ಅವಕಾಶ ಸಿಗಬೇಕು‌ ಹೀಗಾಗಿಯೇ ಎಲ್ಲಾ ಜಿಲ್ಲೆಗಳಲ್ಲಿ ಕ್ರೀಡಾಂಗಣ ನಿರ್ಮಿಸಬೇಕು ಈಗಾಗಲೇ ಸುಮಾರು 8 ಜಿಲ್ಲೆಗಳಲ್ಲಿ ಅಂತಹ ಪ್ರಯತ್ನಗಳು ನಡೆದಿವೆ ಎಂದರು.

ಕೋಲಾರದಲ್ಲಿ ಪ್ರಾರಂಭವಾಗಲಿರುವ ಕ್ರೀಡಾಂಗಣದಲ್ಲಿ ನಾಲ್ಕು ಮೈದಾನಗಳು ಇದ್ದು ಇಲ್ಲಿಯೇ ಲೀಗ್ ಟೂರ್ನಿ ಸಹ ನಡೆಯಲಿದೆ ನಾವು ಹಿಂದೆ ಅನುಭವಿಸಿದ ಕಷ್ಟ ಗೊತ್ತಿದೆ ಅಂತರರಾಷ್ಟ್ರೀಯ ದರ್ಜೆಯ ಸೌಲಭ್ಯ ಸಿಗಬೇಕು ಜೊತೆಗೆ ಆಸಕ್ತರಿಗೆ ಅಭ್ಯಾಸ ನಡೆಸಲು ಅನುಕೂಲವಾಗುವಂತೆ ಮಾಡಲಾಗುತ್ತದೆ ಎಲ್ಲಾ ಉಚಿತವಿರಲಿದ್ದು ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳು ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.

ಈ ಸಂದರ್ಭದಲ್ಲಿ ಕೆಸಿಎ ಸದಸ್ಯ ವಿಜಯ ಸಾಗರ್ ಶೆಟ್ಟಿ,‌ ಕ್ರೀಡಾಪಟುಗಳಾದ ಪುಟ್ಟಸ್ವಾಮಿ, ರಘುರಾಮ್ ಅಡಿಗ, ಕಿಟ್ಟಿ, ಪ್ರಸನ್ನ, ಶಿವು, ಚಂದ್ರಶೇಖರ್, ಉಲ್ಲಾಸ್, ಮಂಜುನಾಥ್ ಹಾಗೂ ಕ್ರಿಕೆಟಿಗರು ಇದ್ದರು.

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

7 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

7 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

18 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

18 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

20 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

23 hours ago