Categories: Accident

ಅ. 24ರಂದು ದ್ವಿಚಕ್ರ ಹಾಗೂ ಕಾರಿನ ನಡುವೆ ಡಿಕ್ಕಿ: ಮಹಿಳೆ ಸಾವು: ತಂದೆ-ಮಗನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಅ.24ರ ರಾತ್ರಿ ಸುಮಾರು 9:30ರ ಸಮಯದಲ್ಲಿ ದೇವನಹಳ್ಳಿ-ದೊಡ್ಡಬಳ್ಳಾಪುರ ರಸ್ತೆಯ ಕಡ್ಡೀಪುಡಿ ಕಾರ್ಖನೆ ಬಳಿ ದ್ವಿಚಕ್ರ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗಂಡ-ಹೆಂಡತಿ, ಮಗನಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆ ರವಾನಿಸಲಾಗಿತ್ತು. ಮಹಿಳೆಯ ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವವಾಗಿತ್ತು. ಸುಮಾರು 10:15ಕ್ಕೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮಧು,‌ ಹೇಮ ದಂಪತಿಯು ನಾಗದೇನಹಳ್ಳಿ ಗೀತಂ ಕಾಲೇಜು ಬಳಿ ಹೋಟೆಲ್ ವ್ಯಾಪಾರ ಮಾಡುತ್ತಿದ್ದರು. ಅ.24ರ ರಾತ್ರಿ 9.30 ಗಂಟೆಗೆ ಹೋಟೆಲ್ ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ಮಗ ಲೇಖನ್ ಗೌಡ ಜೊತೆ ರೈಲ್ವೆ ಸ್ಟೇಷನ್ ಕಡೆ ಬರುವಾಗ ಅತೀವೇಗವಾಗಿ ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಹೋಗಲು ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.

ಬೈಕ್ ಸವಾರ ಮಧುಗೆ ಹೊಟ್ಟೆಗೆ, ಸೊಂಟ ಮತ್ತು ಕೈಕಾಲುಗಳಿಗೆ ಗಾಯಗಳಾಗಿರುತ್ತದೆ. ಹೇಮಾ ಅವರಿಗೆ ತಲೆಗೆ ಅತಿಯಾಗಿ ಪೆಟ್ಟು ಬಿದ್ದು ರಾತ್ರಿ ಸುಮಾರು 10.15 ಗಂಟೆ ಸಮಯದಲ್ಲಿ ಸೆವೆನ್ ಹಿಲ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.  ಮಧು ಅವರ ಮಗ ಲೇಖನ್ ಗೌಡಗೆ ಕಾಲುಗಳಿಗೆ ಮತ್ತು ಬೆನ್ನಿಗೆ ಬಲವಾದ ಗಾಯಗಳಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಕೊಡಿಗೇಹಳ್ಳಿಯ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ….

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

7 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

18 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

19 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

20 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

21 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago