ಅ.24ರ ರಾತ್ರಿ ಸುಮಾರು 9:30ರ ಸಮಯದಲ್ಲಿ ದೇವನಹಳ್ಳಿ-ದೊಡ್ಡಬಳ್ಳಾಪುರ ರಸ್ತೆಯ ಕಡ್ಡೀಪುಡಿ ಕಾರ್ಖನೆ ಬಳಿ ದ್ವಿಚಕ್ರ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗಂಡ-ಹೆಂಡತಿ, ಮಗನಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆ ರವಾನಿಸಲಾಗಿತ್ತು. ಮಹಿಳೆಯ ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವವಾಗಿತ್ತು. ಸುಮಾರು 10:15ಕ್ಕೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮಧು, ಹೇಮ ದಂಪತಿಯು ನಾಗದೇನಹಳ್ಳಿ ಗೀತಂ ಕಾಲೇಜು ಬಳಿ ಹೋಟೆಲ್ ವ್ಯಾಪಾರ ಮಾಡುತ್ತಿದ್ದರು. ಅ.24ರ ರಾತ್ರಿ 9.30 ಗಂಟೆಗೆ ಹೋಟೆಲ್ ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ಮಗ ಲೇಖನ್ ಗೌಡ ಜೊತೆ ರೈಲ್ವೆ ಸ್ಟೇಷನ್ ಕಡೆ ಬರುವಾಗ ಅತೀವೇಗವಾಗಿ ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಹೋಗಲು ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.
ಬೈಕ್ ಸವಾರ ಮಧುಗೆ ಹೊಟ್ಟೆಗೆ, ಸೊಂಟ ಮತ್ತು ಕೈಕಾಲುಗಳಿಗೆ ಗಾಯಗಳಾಗಿರುತ್ತದೆ. ಹೇಮಾ ಅವರಿಗೆ ತಲೆಗೆ ಅತಿಯಾಗಿ ಪೆಟ್ಟು ಬಿದ್ದು ರಾತ್ರಿ ಸುಮಾರು 10.15 ಗಂಟೆ ಸಮಯದಲ್ಲಿ ಸೆವೆನ್ ಹಿಲ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಮಧು ಅವರ ಮಗ ಲೇಖನ್ ಗೌಡಗೆ ಕಾಲುಗಳಿಗೆ ಮತ್ತು ಬೆನ್ನಿಗೆ ಬಲವಾದ ಗಾಯಗಳಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಕೊಡಿಗೇಹಳ್ಳಿಯ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…