ಅ.24ರ ರಾತ್ರಿ ಸುಮಾರು 9:30ರ ಸಮಯದಲ್ಲಿ ದೇವನಹಳ್ಳಿ-ದೊಡ್ಡಬಳ್ಳಾಪುರ ರಸ್ತೆಯ ಕಡ್ಡೀಪುಡಿ ಕಾರ್ಖನೆ ಬಳಿ ದ್ವಿಚಕ್ರ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗಂಡ-ಹೆಂಡತಿ, ಮಗನಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆ ರವಾನಿಸಲಾಗಿತ್ತು. ಮಹಿಳೆಯ ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವವಾಗಿತ್ತು. ಸುಮಾರು 10:15ಕ್ಕೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮಧು, ಹೇಮ ದಂಪತಿಯು ನಾಗದೇನಹಳ್ಳಿ ಗೀತಂ ಕಾಲೇಜು ಬಳಿ ಹೋಟೆಲ್ ವ್ಯಾಪಾರ ಮಾಡುತ್ತಿದ್ದರು. ಅ.24ರ ರಾತ್ರಿ 9.30 ಗಂಟೆಗೆ ಹೋಟೆಲ್ ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ಮಗ ಲೇಖನ್ ಗೌಡ ಜೊತೆ ರೈಲ್ವೆ ಸ್ಟೇಷನ್ ಕಡೆ ಬರುವಾಗ ಅತೀವೇಗವಾಗಿ ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಹೋಗಲು ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.
ಬೈಕ್ ಸವಾರ ಮಧುಗೆ ಹೊಟ್ಟೆಗೆ, ಸೊಂಟ ಮತ್ತು ಕೈಕಾಲುಗಳಿಗೆ ಗಾಯಗಳಾಗಿರುತ್ತದೆ. ಹೇಮಾ ಅವರಿಗೆ ತಲೆಗೆ ಅತಿಯಾಗಿ ಪೆಟ್ಟು ಬಿದ್ದು ರಾತ್ರಿ ಸುಮಾರು 10.15 ಗಂಟೆ ಸಮಯದಲ್ಲಿ ಸೆವೆನ್ ಹಿಲ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಮಧು ಅವರ ಮಗ ಲೇಖನ್ ಗೌಡಗೆ ಕಾಲುಗಳಿಗೆ ಮತ್ತು ಬೆನ್ನಿಗೆ ಬಲವಾದ ಗಾಯಗಳಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಕೊಡಿಗೇಹಳ್ಳಿಯ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…