ಅ.24ರ ರಾತ್ರಿ ಸುಮಾರು 9:30ರ ಸಮಯದಲ್ಲಿ ದೇವನಹಳ್ಳಿ-ದೊಡ್ಡಬಳ್ಳಾಪುರ ರಸ್ತೆಯ ಕಡ್ಡೀಪುಡಿ ಕಾರ್ಖನೆ ಬಳಿ ದ್ವಿಚಕ್ರ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗಂಡ-ಹೆಂಡತಿ, ಮಗನಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆ ರವಾನಿಸಲಾಗಿತ್ತು. ಮಹಿಳೆಯ ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವವಾಗಿತ್ತು. ಸುಮಾರು 10:15ಕ್ಕೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮಧು, ಹೇಮ ದಂಪತಿಯು ನಾಗದೇನಹಳ್ಳಿ ಗೀತಂ ಕಾಲೇಜು ಬಳಿ ಹೋಟೆಲ್ ವ್ಯಾಪಾರ ಮಾಡುತ್ತಿದ್ದರು. ಅ.24ರ ರಾತ್ರಿ 9.30 ಗಂಟೆಗೆ ಹೋಟೆಲ್ ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ಮಗ ಲೇಖನ್ ಗೌಡ ಜೊತೆ ರೈಲ್ವೆ ಸ್ಟೇಷನ್ ಕಡೆ ಬರುವಾಗ ಅತೀವೇಗವಾಗಿ ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಹೋಗಲು ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.
ಬೈಕ್ ಸವಾರ ಮಧುಗೆ ಹೊಟ್ಟೆಗೆ, ಸೊಂಟ ಮತ್ತು ಕೈಕಾಲುಗಳಿಗೆ ಗಾಯಗಳಾಗಿರುತ್ತದೆ. ಹೇಮಾ ಅವರಿಗೆ ತಲೆಗೆ ಅತಿಯಾಗಿ ಪೆಟ್ಟು ಬಿದ್ದು ರಾತ್ರಿ ಸುಮಾರು 10.15 ಗಂಟೆ ಸಮಯದಲ್ಲಿ ಸೆವೆನ್ ಹಿಲ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಮಧು ಅವರ ಮಗ ಲೇಖನ್ ಗೌಡಗೆ ಕಾಲುಗಳಿಗೆ ಮತ್ತು ಬೆನ್ನಿಗೆ ಬಲವಾದ ಗಾಯಗಳಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಕೊಡಿಗೇಹಳ್ಳಿಯ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…