ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದ್ದು, ಪರೀಕ್ಷೆಗಳನ್ನು ನ್ಯಾಯೋಚಿತವಾಗಿ ಹಾಗೂ ಯಾವುದೇ ಅವ್ಯವಹಾರಗಳು ನಡೆಯದಂತೆ ನಡೆಸುವ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಾಮುತ್ತ ಅಕ್ಟೋಬರ್ 29 ರಂದು ಬೆಳಗ್ಗೆ 9.00 ಗಂಟೆಯಿಂದ 6.00 ಗಂಟೆಯವರೆಗೆ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರಡಿಯಲ್ಲಿ ನಿಷೇಧಾಜ್ಞೆಯನ್ನು ವಿಧಿಸಿ ಆದೇಶಿಸಿರುತ್ತಾರೆ.
ಅಕ್ಟೋಬರ್ 29 ರಂದು ಬೆಳಿಗ್ಗೆ 9:00 ರಿಂದ ಸಂಜೆ 6:00 ಗಂಟೆಯವರೆಗೆ ದೇವನಹಳ್ಳಿ ತಾಲ್ಲೂಕಿನಲ್ಲಿ 02 ಪರೀಕ್ಷಾ ಕೇಂದ್ರಗಳು, ಹೊಸಕೋಟೆ ತಾಲ್ಲೂಕಿನಲ್ಲಿ 03 ಪರೀಕ್ಷಾ ಕೇಂದ್ರಗಳು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 05 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳ ಸುತ್ತಲ್ಲೂ 200 ಮೀ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಿತ ಪ್ರದೇಶವೆಂದು ಹಾಗೂ ಪರೀಕ್ಷಾ ಕೇಂದ್ರಗಳ 200 ಮೀ. ಅಂತರದಲ್ಲಿ ಯಾವುದೇ ಜೆರಾಕ್ಸ್ ಅಂಗಡಿಗಳನ್ನು ತೆರೆಯದಂತೆ ನಿಷೇದಾಜ್ಞೆಯನ್ನು ವಿಧಿಸಿ ಆದೇಶಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…