ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರ ನೇತೃತ್ವದಲ್ಲಿ, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಚುನಾಯಿತ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಬು ಜಗಜೀವನ ರಾಮ್ ಭವನ, ನಗರ ಪೊಲೀಸ್ ಠಾಣ ಹಿಂಭಾಗ, ದೊಡ್ಡಬಳ್ಳಾಪುರ ಟೌನ್ ಇಲ್ಲಿ ಅಕ್ಟೋಬರ್ 31 ರಂದು ಬೆಳಗ್ಗೆ 10.00 ಗಂಟೆಗೆ ಜನತಾ ದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ತಿಳಿಸಿದ್ದಾರೆ.
ಸರ್ಕಾರದ ನಿರ್ದೇಶನದಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ, ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಜಿಲ್ಲಾಡಳಿತದಿಂದ ಕ್ರಮಕೈಗೊಳ್ಳಲಾಗುವುದು.
ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಉಪಸ್ಥಿತರಿರುತ್ತಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಕುಂದು ಕೊರತೆ/ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಪಡೆಯುವುದರ ಮುಖಾಂತರ ಜನತಾ ದರ್ಶನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…