ಅ.5ರಿಂದ ಸಂಚಾರಿ ಉದ್ಯೋಗ ನೋಂದಣಿ ಶಿಬಿರ

ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ,  ಬೆಂಗಳೂರು ಇವರ ವತಿಯಿಂದ ಅ.5, 12, 19 ಹಾಗೂ 26ರವರೆಗೆ ಬೆಳಿಗ್ಗೆ 11ರಿಂದ ಅಪರಾಹ್ನ 3ರವರೆಗೆ ಸಂಚಾರಿ ಉದ್ಯೋಗ ನೋಂದಣಿ ಶಿಬಿರವನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಠಡಿ ಸಂಖ್ಯೆ: 132, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಎ, ಬಿ.ಕಾಂ, ಬಿಎಸ್ಸಿ, ಬಿ.ಎಡ್, ಡಿ.ಎಡ್, ಬಿ.ಬಿ.ಎ, ಬಿ.ಸಿ.ಎ, ಸೀನಿಯರ್ ಟೈಪಿಂಗ್ ಹಾಗೂ ಶೀಘ್ರಲಿಪಿಗಾರರ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು  ದಾಖಲಾತಿಗಳ ಮೂಲಪ್ರತಿ ಹಾಗೂ ನಕಲು, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ನ  ಪ್ರತಿಗಳು  ಹಾಗೂ ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಶಿಬಿರ ನಡೆಯುವ ಸ್ಥಳದಲ್ಲಿ ಹಾಜರಿದ್ದು, ನೋಂದಣಿಯನ್ನು ಮಾಡಿಸಿಕೊಳ್ಳಬಹುದಾಗಿದೆ.

ಉದ್ಯೋಗ ನೋಂದಣಿ ಮಾಡ ಬಯಸುವ ಅಭ್ಯರ್ಥಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಏಷ್ಯಾಟಿಕ ಕಟ್ಟಡ, 2ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು-09 ಅಥವಾ ದೂರವಾಣಿ ಸಂಖ್ಯೆ:  080-22374582, 9448220647 ಗೆ ಸಂಪರ್ಕಿಸಬಹುದು ಎಂದು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

13 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

15 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

18 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

2 days ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

2 days ago