Categories: Crime

ಆಂಟಿಯನ್ನು ತಾನೇ ಕೊಲೆ ಮಾಡಿ ಶವದ ಮುಂದೆ ಕಣ್ಣೀರು ಹಾಕಿ ಪ್ರಿಯಕರ ಹೈ ಡ್ರಾಮಾ:‌ ಮಹಿಳೆಯನ್ನು ಕೊಂದು ಪೊಲೀಸರಿಗೆ ತಾನೇ ಮಾಹಿತಿ ನೀಡಿದ್ದಾತನ ಅರೆಸ್ಟ್

ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಕೊಂದ ಘಟನೆ ಜನವರಿ 14ರ ರಾತ್ರಿ ಬಾಗಲಕೋಟೆಯ ಜಮಖಂಡಿ ತಾಲ್ಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ನಡೆದಿದೆ.

ತೋಟದ ಮನೆಯಲ್ಲಿ ಒಂಟಿ ಮಹಿಳೆಯೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಾನೇ ಕೊಲೆ ಮಾಡಿದ್ದರೂ ಶವದ ಮುಂದೆ ಕಣ್ಣೀರು ಹಾಕಿ ಪ್ರಿಯಕರ ಹೈ ಡ್ರಾಮಾ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ವೇಳೆ ಆತ ಸತ್ಯ ಬಿಚ್ಚಿಟ್ಟಿದ್ದಾನೆ.

ಕೊಲೆಯಾದ ಮಹಿಳೆಯನ್ನು ಯಮನವ್ವ (40)ಎಂದು ಗುರುತಿಸಲಾಗಿದ್ದು, ಆರೋಪಿಯ ಹೆಸರು ಶ್ರೀಶೈಲ ಪಾಟೀಲ್ (67) ಎಂದು ಪೊಲೀಸರು ತಿಳಿಸಿದ್ದಾರೆ.

ಯಮನವ್ವ ಸುಮಾರು 20 ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನ ಪಡೆದಿದ್ದು, ಬಳಿಕ ಶ್ರೀಶೈಲ ಪಾಟೀಲ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು.

ಹೀಗಿರುವಾಗ ಇತ್ತೀಚೆಗೆ ಯಮನವ್ವ 27 ವರ್ಷದ ಯುವಕನೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂಬ ವಿಚಾರದಿಂದ ಶ್ರೀಶೈಲ ಆಕ್ರೋಶಗೊಂಡಿದ್ದನು. ಇದೇ ವಿಷಯಕ್ಕೆ ರಾತ್ರಿ ಇಬ್ಬರ ನಡುವೆ ಆರಂಭವಾಗಿದ್ದ ಜಗಳ ತೀವ್ರ ಸ್ವರೂಪ ಪಡೆದಿತ್ತು.

ಜಗಳದ ವೇಳೆ ಶ್ರೀಶೈಲ ಪಾಟಿಲ್ ಯಮನವ್ವಳ ಕಿವಿ ಭಾಗಕ್ಕೆ ಬಲವಾಗಿ ಹೊಡೆದಿದ್ದ. ಅಷ್ಟಕ್ಕೆ ಸುಮ್ಮನಾಗದ ಪ್ರಿಯಕರ, ಕತ್ತು ಹಿಸುಕಿ ಕೊಲೆಯೂ ಮಾಡಿದ್ದ. ಮಹಿಳೆಯ ಉಸಿರು ನಿಂತ ಮೇಲೆ ಭಯಕ್ಕೆ ಸ್ಥಳದಿಂದ ಕಾಲ್ಕಿತ್ತಿದ್ದ ಎಂದು ತನಿಖೆಯ ವೇಳೆ ಪೊಲೀಸರಿಗೆ ತಿಳಿದು ಬಂದಿದೆ.

ಮರುದಿನ ಬೆಳಿಗ್ಗೆ ಆತನೇ ಮನೆಯ ಬಾಗಿಲು ತೆರೆದು ಯಮನವ್ವ ಸಾವನ್ನಪ್ಪಿದ್ದಾಳೆ ಎಂದು ಇತರರಿಗೆ ಸುದ್ದಿ ತಿಳಿಸಿದ್ದ. ಆಕೆಗೆ ಹೃದಯಾಘಾತವಾಗಿದೆ ಎಂಬಂತೆ ನಾಟಕವಾಡಿ ಕಣ್ಣೀರು ಹಾಕಿದ್ದ ಆರೋಪಿ, ಬಳಿಕ ಸಾವಳಗಿ ಪೊಲೀಸರಿಗೂ ತಾನೇ ಮಾಹಿತಿ ನೀಡಿದ್ದ. ಆದರೆ ವಿಚಾರಣೆಯ ವೇಳೆ ಆರೋಪಿಯ ಮೊಸಳೆ ಕಣ್ಣೀರು ಬಯಲಾಗಿದ್ದು, ಸತ್ಯ ಒಪ್ಪಿಕೊಂಡಿದ್ದಾನೆ.

Ramesh Babu

Journalist

Recent Posts

ಯುಗಾದಿ, ರಂಜಾನ್ ಹಬ್ಬ ವಿಶೇಷ: ಜೂಜಾಟ ಸೇರಿದಂತೆ ಅಕ್ರಮ ಚಟುವಟಿಕೆ ತಡೆಗೆ ಪೊಲೀಸ್ ಇಲಾಖೆ ಕಸರತ್ತು: ಬೆಳ್ಳಂಬೆಳಗ್ಗೆ ರೌಡಿ ಪರೇಡ್: 70ಕ್ಕೂ ಹೆಚ್ಚು ರೌಡಿಗಳಿಗೆ ಬೆವರಿಳಿಸಿದ ಡಿವೈಎಸ್ ಪಿ ಪಾಂಡುರಂಗ

ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಅಫ್ತಾ ವಸೂಲಿ…

29 minutes ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

9 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago