Categories: Crime

ಆಂಟಿಯನ್ನು ತಾನೇ ಕೊಲೆ ಮಾಡಿ ಶವದ ಮುಂದೆ ಕಣ್ಣೀರು ಹಾಕಿ ಪ್ರಿಯಕರ ಹೈ ಡ್ರಾಮಾ:‌ ಮಹಿಳೆಯನ್ನು ಕೊಂದು ಪೊಲೀಸರಿಗೆ ತಾನೇ ಮಾಹಿತಿ ನೀಡಿದ್ದಾತನ ಅರೆಸ್ಟ್

ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಕೊಂದ ಘಟನೆ ಜನವರಿ 14ರ ರಾತ್ರಿ ಬಾಗಲಕೋಟೆಯ ಜಮಖಂಡಿ ತಾಲ್ಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ನಡೆದಿದೆ.

ತೋಟದ ಮನೆಯಲ್ಲಿ ಒಂಟಿ ಮಹಿಳೆಯೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಾನೇ ಕೊಲೆ ಮಾಡಿದ್ದರೂ ಶವದ ಮುಂದೆ ಕಣ್ಣೀರು ಹಾಕಿ ಪ್ರಿಯಕರ ಹೈ ಡ್ರಾಮಾ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ವೇಳೆ ಆತ ಸತ್ಯ ಬಿಚ್ಚಿಟ್ಟಿದ್ದಾನೆ.

ಕೊಲೆಯಾದ ಮಹಿಳೆಯನ್ನು ಯಮನವ್ವ (40)ಎಂದು ಗುರುತಿಸಲಾಗಿದ್ದು, ಆರೋಪಿಯ ಹೆಸರು ಶ್ರೀಶೈಲ ಪಾಟೀಲ್ (67) ಎಂದು ಪೊಲೀಸರು ತಿಳಿಸಿದ್ದಾರೆ.

ಯಮನವ್ವ ಸುಮಾರು 20 ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನ ಪಡೆದಿದ್ದು, ಬಳಿಕ ಶ್ರೀಶೈಲ ಪಾಟೀಲ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು.

ಹೀಗಿರುವಾಗ ಇತ್ತೀಚೆಗೆ ಯಮನವ್ವ 27 ವರ್ಷದ ಯುವಕನೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂಬ ವಿಚಾರದಿಂದ ಶ್ರೀಶೈಲ ಆಕ್ರೋಶಗೊಂಡಿದ್ದನು. ಇದೇ ವಿಷಯಕ್ಕೆ ರಾತ್ರಿ ಇಬ್ಬರ ನಡುವೆ ಆರಂಭವಾಗಿದ್ದ ಜಗಳ ತೀವ್ರ ಸ್ವರೂಪ ಪಡೆದಿತ್ತು.

ಜಗಳದ ವೇಳೆ ಶ್ರೀಶೈಲ ಪಾಟಿಲ್ ಯಮನವ್ವಳ ಕಿವಿ ಭಾಗಕ್ಕೆ ಬಲವಾಗಿ ಹೊಡೆದಿದ್ದ. ಅಷ್ಟಕ್ಕೆ ಸುಮ್ಮನಾಗದ ಪ್ರಿಯಕರ, ಕತ್ತು ಹಿಸುಕಿ ಕೊಲೆಯೂ ಮಾಡಿದ್ದ. ಮಹಿಳೆಯ ಉಸಿರು ನಿಂತ ಮೇಲೆ ಭಯಕ್ಕೆ ಸ್ಥಳದಿಂದ ಕಾಲ್ಕಿತ್ತಿದ್ದ ಎಂದು ತನಿಖೆಯ ವೇಳೆ ಪೊಲೀಸರಿಗೆ ತಿಳಿದು ಬಂದಿದೆ.

ಮರುದಿನ ಬೆಳಿಗ್ಗೆ ಆತನೇ ಮನೆಯ ಬಾಗಿಲು ತೆರೆದು ಯಮನವ್ವ ಸಾವನ್ನಪ್ಪಿದ್ದಾಳೆ ಎಂದು ಇತರರಿಗೆ ಸುದ್ದಿ ತಿಳಿಸಿದ್ದ. ಆಕೆಗೆ ಹೃದಯಾಘಾತವಾಗಿದೆ ಎಂಬಂತೆ ನಾಟಕವಾಡಿ ಕಣ್ಣೀರು ಹಾಕಿದ್ದ ಆರೋಪಿ, ಬಳಿಕ ಸಾವಳಗಿ ಪೊಲೀಸರಿಗೂ ತಾನೇ ಮಾಹಿತಿ ನೀಡಿದ್ದ. ಆದರೆ ವಿಚಾರಣೆಯ ವೇಳೆ ಆರೋಪಿಯ ಮೊಸಳೆ ಕಣ್ಣೀರು ಬಯಲಾಗಿದ್ದು, ಸತ್ಯ ಒಪ್ಪಿಕೊಂಡಿದ್ದಾನೆ.

Ramesh Babu

Journalist

Recent Posts

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

6 hours ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

10 hours ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

10 hours ago

ಕೂಗೇನಹಳ್ಳಿ ಗೇಟ್ ಬಳಿ ಟೊಮೆಟೊ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…

12 hours ago

ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವ ಹುಡುಕುತ್ತಾ ಹೊರಟಾಗ……

ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…

2 days ago

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…

2 days ago