ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಕೊಂದ ಘಟನೆ ಜನವರಿ 14ರ ರಾತ್ರಿ ಬಾಗಲಕೋಟೆಯ ಜಮಖಂಡಿ ತಾಲ್ಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ನಡೆದಿದೆ.
ತೋಟದ ಮನೆಯಲ್ಲಿ ಒಂಟಿ ಮಹಿಳೆಯೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಾನೇ ಕೊಲೆ ಮಾಡಿದ್ದರೂ ಶವದ ಮುಂದೆ ಕಣ್ಣೀರು ಹಾಕಿ ಪ್ರಿಯಕರ ಹೈ ಡ್ರಾಮಾ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ವೇಳೆ ಆತ ಸತ್ಯ ಬಿಚ್ಚಿಟ್ಟಿದ್ದಾನೆ.
ಕೊಲೆಯಾದ ಮಹಿಳೆಯನ್ನು ಯಮನವ್ವ (40)ಎಂದು ಗುರುತಿಸಲಾಗಿದ್ದು, ಆರೋಪಿಯ ಹೆಸರು ಶ್ರೀಶೈಲ ಪಾಟೀಲ್ (67) ಎಂದು ಪೊಲೀಸರು ತಿಳಿಸಿದ್ದಾರೆ.
ಯಮನವ್ವ ಸುಮಾರು 20 ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನ ಪಡೆದಿದ್ದು, ಬಳಿಕ ಶ್ರೀಶೈಲ ಪಾಟೀಲ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು.
ಹೀಗಿರುವಾಗ ಇತ್ತೀಚೆಗೆ ಯಮನವ್ವ 27 ವರ್ಷದ ಯುವಕನೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂಬ ವಿಚಾರದಿಂದ ಶ್ರೀಶೈಲ ಆಕ್ರೋಶಗೊಂಡಿದ್ದನು. ಇದೇ ವಿಷಯಕ್ಕೆ ರಾತ್ರಿ ಇಬ್ಬರ ನಡುವೆ ಆರಂಭವಾಗಿದ್ದ ಜಗಳ ತೀವ್ರ ಸ್ವರೂಪ ಪಡೆದಿತ್ತು.
ಜಗಳದ ವೇಳೆ ಶ್ರೀಶೈಲ ಪಾಟಿಲ್ ಯಮನವ್ವಳ ಕಿವಿ ಭಾಗಕ್ಕೆ ಬಲವಾಗಿ ಹೊಡೆದಿದ್ದ. ಅಷ್ಟಕ್ಕೆ ಸುಮ್ಮನಾಗದ ಪ್ರಿಯಕರ, ಕತ್ತು ಹಿಸುಕಿ ಕೊಲೆಯೂ ಮಾಡಿದ್ದ. ಮಹಿಳೆಯ ಉಸಿರು ನಿಂತ ಮೇಲೆ ಭಯಕ್ಕೆ ಸ್ಥಳದಿಂದ ಕಾಲ್ಕಿತ್ತಿದ್ದ ಎಂದು ತನಿಖೆಯ ವೇಳೆ ಪೊಲೀಸರಿಗೆ ತಿಳಿದು ಬಂದಿದೆ.
ಮರುದಿನ ಬೆಳಿಗ್ಗೆ ಆತನೇ ಮನೆಯ ಬಾಗಿಲು ತೆರೆದು ಯಮನವ್ವ ಸಾವನ್ನಪ್ಪಿದ್ದಾಳೆ ಎಂದು ಇತರರಿಗೆ ಸುದ್ದಿ ತಿಳಿಸಿದ್ದ. ಆಕೆಗೆ ಹೃದಯಾಘಾತವಾಗಿದೆ ಎಂಬಂತೆ ನಾಟಕವಾಡಿ ಕಣ್ಣೀರು ಹಾಕಿದ್ದ ಆರೋಪಿ, ಬಳಿಕ ಸಾವಳಗಿ ಪೊಲೀಸರಿಗೂ ತಾನೇ ಮಾಹಿತಿ ನೀಡಿದ್ದ. ಆದರೆ ವಿಚಾರಣೆಯ ವೇಳೆ ಆರೋಪಿಯ ಮೊಸಳೆ ಕಣ್ಣೀರು ಬಯಲಾಗಿದ್ದು, ಸತ್ಯ ಒಪ್ಪಿಕೊಂಡಿದ್ದಾನೆ.
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…