ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಕೊಂದ ಘಟನೆ ಜನವರಿ 14ರ ರಾತ್ರಿ ಬಾಗಲಕೋಟೆಯ ಜಮಖಂಡಿ ತಾಲ್ಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ನಡೆದಿದೆ.
ತೋಟದ ಮನೆಯಲ್ಲಿ ಒಂಟಿ ಮಹಿಳೆಯೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಾನೇ ಕೊಲೆ ಮಾಡಿದ್ದರೂ ಶವದ ಮುಂದೆ ಕಣ್ಣೀರು ಹಾಕಿ ಪ್ರಿಯಕರ ಹೈ ಡ್ರಾಮಾ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ವೇಳೆ ಆತ ಸತ್ಯ ಬಿಚ್ಚಿಟ್ಟಿದ್ದಾನೆ.
ಕೊಲೆಯಾದ ಮಹಿಳೆಯನ್ನು ಯಮನವ್ವ (40)ಎಂದು ಗುರುತಿಸಲಾಗಿದ್ದು, ಆರೋಪಿಯ ಹೆಸರು ಶ್ರೀಶೈಲ ಪಾಟೀಲ್ (67) ಎಂದು ಪೊಲೀಸರು ತಿಳಿಸಿದ್ದಾರೆ.
ಯಮನವ್ವ ಸುಮಾರು 20 ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನ ಪಡೆದಿದ್ದು, ಬಳಿಕ ಶ್ರೀಶೈಲ ಪಾಟೀಲ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು.
ಹೀಗಿರುವಾಗ ಇತ್ತೀಚೆಗೆ ಯಮನವ್ವ 27 ವರ್ಷದ ಯುವಕನೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂಬ ವಿಚಾರದಿಂದ ಶ್ರೀಶೈಲ ಆಕ್ರೋಶಗೊಂಡಿದ್ದನು. ಇದೇ ವಿಷಯಕ್ಕೆ ರಾತ್ರಿ ಇಬ್ಬರ ನಡುವೆ ಆರಂಭವಾಗಿದ್ದ ಜಗಳ ತೀವ್ರ ಸ್ವರೂಪ ಪಡೆದಿತ್ತು.
ಜಗಳದ ವೇಳೆ ಶ್ರೀಶೈಲ ಪಾಟಿಲ್ ಯಮನವ್ವಳ ಕಿವಿ ಭಾಗಕ್ಕೆ ಬಲವಾಗಿ ಹೊಡೆದಿದ್ದ. ಅಷ್ಟಕ್ಕೆ ಸುಮ್ಮನಾಗದ ಪ್ರಿಯಕರ, ಕತ್ತು ಹಿಸುಕಿ ಕೊಲೆಯೂ ಮಾಡಿದ್ದ. ಮಹಿಳೆಯ ಉಸಿರು ನಿಂತ ಮೇಲೆ ಭಯಕ್ಕೆ ಸ್ಥಳದಿಂದ ಕಾಲ್ಕಿತ್ತಿದ್ದ ಎಂದು ತನಿಖೆಯ ವೇಳೆ ಪೊಲೀಸರಿಗೆ ತಿಳಿದು ಬಂದಿದೆ.
ಮರುದಿನ ಬೆಳಿಗ್ಗೆ ಆತನೇ ಮನೆಯ ಬಾಗಿಲು ತೆರೆದು ಯಮನವ್ವ ಸಾವನ್ನಪ್ಪಿದ್ದಾಳೆ ಎಂದು ಇತರರಿಗೆ ಸುದ್ದಿ ತಿಳಿಸಿದ್ದ. ಆಕೆಗೆ ಹೃದಯಾಘಾತವಾಗಿದೆ ಎಂಬಂತೆ ನಾಟಕವಾಡಿ ಕಣ್ಣೀರು ಹಾಕಿದ್ದ ಆರೋಪಿ, ಬಳಿಕ ಸಾವಳಗಿ ಪೊಲೀಸರಿಗೂ ತಾನೇ ಮಾಹಿತಿ ನೀಡಿದ್ದ. ಆದರೆ ವಿಚಾರಣೆಯ ವೇಳೆ ಆರೋಪಿಯ ಮೊಸಳೆ ಕಣ್ಣೀರು ಬಯಲಾಗಿದ್ದು, ಸತ್ಯ ಒಪ್ಪಿಕೊಂಡಿದ್ದಾನೆ.
ಚಿಕ್ಕನಾಯಕನಹಳ್ಳಿ: ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ, ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ…
ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…
ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…