ನೆಲಮಂಗಲ: ನೆಲಮಂಗಲ ಜಾಸ್ ಟೋಲ್ ಬಳಿ ಕುಡಿದ ನಶೆಯಲ್ಲಿ ಖಾಸಗಿ ಆಂಬ್ಯುಲೆನ್ಸ್ ಚಾಲಕನನ್ನು ಅಡ್ಡಗಟ್ಟಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಯಲಚೇನಹಳ್ಳಿ ಮೂಲದ ಯುವರಾಜ್ ಸಿಂಗ್, ಮಂಜುನಾಥ್, ಲತೀಶ್ ಬಂಧಿತರು.
ನಿನ್ನೆ ರಾತ್ರಿ ತುಮಕೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಖಾಸಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ರೋಗಿಯನ್ನ ದಾಖಲಿಸುವ ವೇಳೆ ಕ್ಷುಲ್ಲಕ ವಿಚಾರದಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಖಾಸಗಿ ಆಂಬ್ಯಲೆನ್ಸ್ ನ್ನು ಅಡ್ಡಗಟ್ಟಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿತ್ತು.
ಆಂಬ್ಯುಲೆನ್ಸ್ ನ್ನು ಅತಿ ವೇಗವಾಗಿ ಚಾಲನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಐದಾರು ಕಿಲೋ ಮೀಟರ್ ಚೇಸ್ ಮಾಡಿ, ಟೋಲ್ ಬಳಿ ಆಂಬ್ಯುಲೆನ್ಸ್ ನಿಂತಾಗ ಚಾಲಕನಿಗೆ ಹಲ್ಲೆ ನಡೆಸಲಾಗಿದೆ.
ಐದು ತಿಂಗಳ ಮಗುವಿಗೆ ತುರ್ತು ಚಿಕಿತ್ಸೆಗೆ ಆಕ್ಸಿಜನ್ ಮೂಲಕ ಆಂಬ್ಯುಲೆನ್ಸ್ ಮೂಲಕ ರವಾನಿಸಲಾಗುತ್ತಿತ್ತು. ಈ ವೇಳೆ ಗಲಾಟೆ ನಡೆದಿದೆ. ಗಲಾಟೆ ಮಾಡಿದವರನ್ನ ತಡೆದು ಆಂಬ್ಯುಲೆನ್ಸ್ ನ್ನು ಆಸ್ಪತ್ರೆಗೆ ಪೊಲೀಸರು ಕಳಿಸಿದರು.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…