ನೆಲಮಂಗಲ: ನೆಲಮಂಗಲ ಜಾಸ್ ಟೋಲ್ ಬಳಿ ಕುಡಿದ ನಶೆಯಲ್ಲಿ ಖಾಸಗಿ ಆಂಬ್ಯುಲೆನ್ಸ್ ಚಾಲಕನನ್ನು ಅಡ್ಡಗಟ್ಟಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಯಲಚೇನಹಳ್ಳಿ ಮೂಲದ ಯುವರಾಜ್ ಸಿಂಗ್, ಮಂಜುನಾಥ್, ಲತೀಶ್ ಬಂಧಿತರು.
ನಿನ್ನೆ ರಾತ್ರಿ ತುಮಕೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಖಾಸಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ರೋಗಿಯನ್ನ ದಾಖಲಿಸುವ ವೇಳೆ ಕ್ಷುಲ್ಲಕ ವಿಚಾರದಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಖಾಸಗಿ ಆಂಬ್ಯಲೆನ್ಸ್ ನ್ನು ಅಡ್ಡಗಟ್ಟಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿತ್ತು.
ಆಂಬ್ಯುಲೆನ್ಸ್ ನ್ನು ಅತಿ ವೇಗವಾಗಿ ಚಾಲನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಐದಾರು ಕಿಲೋ ಮೀಟರ್ ಚೇಸ್ ಮಾಡಿ, ಟೋಲ್ ಬಳಿ ಆಂಬ್ಯುಲೆನ್ಸ್ ನಿಂತಾಗ ಚಾಲಕನಿಗೆ ಹಲ್ಲೆ ನಡೆಸಲಾಗಿದೆ.
ಐದು ತಿಂಗಳ ಮಗುವಿಗೆ ತುರ್ತು ಚಿಕಿತ್ಸೆಗೆ ಆಕ್ಸಿಜನ್ ಮೂಲಕ ಆಂಬ್ಯುಲೆನ್ಸ್ ಮೂಲಕ ರವಾನಿಸಲಾಗುತ್ತಿತ್ತು. ಈ ವೇಳೆ ಗಲಾಟೆ ನಡೆದಿದೆ. ಗಲಾಟೆ ಮಾಡಿದವರನ್ನ ತಡೆದು ಆಂಬ್ಯುಲೆನ್ಸ್ ನ್ನು ಆಸ್ಪತ್ರೆಗೆ ಪೊಲೀಸರು ಕಳಿಸಿದರು.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…