ನೆಲಮಂಗಲ: ನೆಲಮಂಗಲ ಜಾಸ್ ಟೋಲ್ ಬಳಿ ಕುಡಿದ ನಶೆಯಲ್ಲಿ ಖಾಸಗಿ ಆಂಬ್ಯುಲೆನ್ಸ್ ಚಾಲಕನನ್ನು ಅಡ್ಡಗಟ್ಟಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಯಲಚೇನಹಳ್ಳಿ ಮೂಲದ ಯುವರಾಜ್ ಸಿಂಗ್, ಮಂಜುನಾಥ್, ಲತೀಶ್ ಬಂಧಿತರು.
ನಿನ್ನೆ ರಾತ್ರಿ ತುಮಕೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಖಾಸಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ರೋಗಿಯನ್ನ ದಾಖಲಿಸುವ ವೇಳೆ ಕ್ಷುಲ್ಲಕ ವಿಚಾರದಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಖಾಸಗಿ ಆಂಬ್ಯಲೆನ್ಸ್ ನ್ನು ಅಡ್ಡಗಟ್ಟಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿತ್ತು.
ಆಂಬ್ಯುಲೆನ್ಸ್ ನ್ನು ಅತಿ ವೇಗವಾಗಿ ಚಾಲನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಐದಾರು ಕಿಲೋ ಮೀಟರ್ ಚೇಸ್ ಮಾಡಿ, ಟೋಲ್ ಬಳಿ ಆಂಬ್ಯುಲೆನ್ಸ್ ನಿಂತಾಗ ಚಾಲಕನಿಗೆ ಹಲ್ಲೆ ನಡೆಸಲಾಗಿದೆ.
ಐದು ತಿಂಗಳ ಮಗುವಿಗೆ ತುರ್ತು ಚಿಕಿತ್ಸೆಗೆ ಆಕ್ಸಿಜನ್ ಮೂಲಕ ಆಂಬ್ಯುಲೆನ್ಸ್ ಮೂಲಕ ರವಾನಿಸಲಾಗುತ್ತಿತ್ತು. ಈ ವೇಳೆ ಗಲಾಟೆ ನಡೆದಿದೆ. ಗಲಾಟೆ ಮಾಡಿದವರನ್ನ ತಡೆದು ಆಂಬ್ಯುಲೆನ್ಸ್ ನ್ನು ಆಸ್ಪತ್ರೆಗೆ ಪೊಲೀಸರು ಕಳಿಸಿದರು.
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…