ದೊಡ್ಡಬಳ್ಳಾಪುರ: ಬೋರ್ ವೆಲ್ ಲಾರಿ ನಿಲುಗಡೆ ಶೆಡ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೋರ್ ವೆಲ್ ಯಂತ್ರ ಸಾಗಾಟ ಲಾರಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ರಾತ್ರಿ ಸುಮಾರು 10ಗಂಟೆ ಸಮಯದಲ್ಲಿ ನಗರದ ಹೊರವಲಯದಲ್ಲಿರುವ ಹಮಾಮ್ ಬಳಿ ನಡೆದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಬೆಂಕಿಯ ಕೆನ್ನಾಲಿಗೆಗೆ ಒಂದು ಬೋರ್ ವೆಲ್ ಯಂತ್ರ ಸಾಗಾಟ ಲಾರಿ ಸೇರಿದಂತೆ ಸುಮಾರು 2 ಕೋಟಿ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ತಮಿಳುನಾಡು ಮೂಲದ ಬೋರ್ ವೆಲ್ ಲಾರಿ ಮಾಲೀಕ ಹಮಾಮ್ ಬಳಿ 8 ವರ್ಷಗಳ ಹಿಂದೆ ಬಾಡಿಗೆಗೆ ಜಾಗ ತೆಗೆದುಕೊಂಡು ಶೆಡ್ ಮಾಡಿಕೊಂಡು ಅಲ್ಲಿ ಬೋರ್ ವೆಲ್ ಲಾರಿ ಹಾಗೂ ಬೋರ್ ವೆಲ್ ಗೆ ಸಂಬಂಧಪಟ್ಟ ವಸ್ತುಗಳನ್ನು ಇರಿಸಲಾಗಿತ್ತು. ನಿನ್ನೆ ರಾತ್ರಿ ಶೆಡ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿರುವುದಿಲ್ಲ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…