ಆಕಸ್ಮಿಕ ಬೆಂಕಿ: ಹುಲ್ಲಿನ ಬಣವೆ, ಹಲಸಿನ ಮರ, ಹನಿ ನೀರಾವರಿ ವ್ಯವಸ್ಥೆ ಸಂಪೂರ್ಣ ಭಸ್ಮ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಭಾನುವಾರ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ವ್ಯಾಪಿಸಿಕೊಂಡು,
ಗ್ರಾಮದ ರೈತ ವೆಂಕಟಪ್ಪ ಅವರಿಗೆ ಸೇರಿದ ಕೃಷಿಭೂಮಿಯಲ್ಲಿ ಇಟ್ಟುಕೊಂಡಿದ್ದ ಸುಮಾರು ಐದು ಟ್ರಾಕ್ಟರ್ ಲೋಡ್ ರಾಗಿ ಹುಲ್ಲಿನ ಬಣವೆ, ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ಹಲಸಿನ ಮರ, ಜೊತೆಗೆ ಟೊಮೋಟೊ ಬೆಳೆಗೆ ಅಳವಡಿಸಲಾಗಿದ್ದ ಅಪಾರ ಮೌಲ್ಯದ ಹನಿ ನೀರಾವರಿ ಪೈಪುಗಳು ಹಾಗೂ ಟೊಮೇಟೊ ಕಡ್ಡಿಗಳು ಬೆಂಕಿಗಾಹುತಿಯಾಗಿವೆ. ಈ ಅವಘಡದಿಂದ ರೈತರಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಬೆಂಕಿ ಕಾಣಿಸಿಕೊಂಡ ಕೂಡಲೇ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ನೀರು, ಮಣ್ಣು ಬಳಸಿ ಬೆಂಕಿ ನಂದಿಸಲು ಯತ್ನಿಸಿದರೂ, ಬಿಸಿಲಿನ ತೀವ್ರತೆ, ಒಣಹವಾಮಾನ ಹಾಗೂ ಗಾಳಿಯ ವೇಗದಿಂದಾಗಿ ಬೆಂಕಿ ಇನ್ನಷ್ಟು ವ್ಯಾಪಿಸಿಕೊಂಡಿದೆ. ಪರಿಸ್ಥಿತಿ ಕೈ ಮೀರುವುದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರೂ, ಅಷ್ಟರೊಳಗೆ ಬಹುತೇಕ ಕೃಷಿ ಸಾಮಗ್ರಿಗಳು ಭಸ್ಮವಾಗಿದ್ದರಿಂದ ನಷ್ಟ ತಪ್ಪಿಸಲು ಸಾಧ್ಯವಾಗಲಿಲ್ಲ. ನಂತರ ಬೆಂಕಿ ಇನ್ನಷ್ಟು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಯಿತು.

ರೈತ ವೆಂಕಟಪ್ಪ ಅವರ ಕುಟುಂಬಕ್ಕೆ ರಾಗಿ ಹುಲ್ಲು, ಹಲಸಿನ ಕಾಯಿ ಹಾಗೂ ಟೊಮೇಟೊ ಬೆಳೆ ಮುಖ್ಯ ಆದಾಯದ ಮೂಲವಾಗಿತ್ತು. ಇಂತಹ ಸಂದರ್ಭದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವರ ಜೀವನಾಧಾರಕ್ಕೆ ಭಾರೀ ಹೊಡೆತ ನೀಡಿದೆ. ಮುಂದಿನ ಬೆಳೆಗಾಗಿ ಬಳಸಲು ಸಂಗ್ರಹಿಸಿದ್ದ ಹುಲ್ಲು ಹಾಗೂ ನೀರಾವರಿ ವ್ಯವಸ್ಥೆ ನಾಶವಾದುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಗ್ರಾಮಸ್ಥರು ಹಾಗೂ ರೈತ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ವೇಳೆ ಯುವ ಮುಖಂಡ ಉದಯ ಆರಾಧ್ಯ ಮಾತಾನಾಡಿ, ಆಕಸ್ಮಿಕ ಬೆಂಕಿಯಿಂದ ಸಂಪೂರ್ಣ ನಷ್ಟಕ್ಕೆ ಒಳಗಾದ ರೈತ ವೆಂಕಟಪ್ಪ ಅವರಿಗೆ ತಕ್ಷಣ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು, ಜೊತೆಗೆ ಹಾನಿಯ ಸಮೀಕ್ಷೆ ನಡೆಸಿ ಪರಿಹಾರ ಮೊತ್ತ ಘೋಷಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಿದರು.

Ramesh Babu

Journalist

Recent Posts

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

13 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

14 hours ago

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…

23 hours ago

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನ

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…

1 day ago

ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ

ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…

2 days ago

ರಘುನಾಥಪುರ ಬಳಿ ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು

ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…

2 days ago