ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಭಾನುವಾರ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ವ್ಯಾಪಿಸಿಕೊಂಡು,
ಗ್ರಾಮದ ರೈತ ವೆಂಕಟಪ್ಪ ಅವರಿಗೆ ಸೇರಿದ ಕೃಷಿಭೂಮಿಯಲ್ಲಿ ಇಟ್ಟುಕೊಂಡಿದ್ದ ಸುಮಾರು ಐದು ಟ್ರಾಕ್ಟರ್ ಲೋಡ್ ರಾಗಿ ಹುಲ್ಲಿನ ಬಣವೆ, ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ಹಲಸಿನ ಮರ, ಜೊತೆಗೆ ಟೊಮೋಟೊ ಬೆಳೆಗೆ ಅಳವಡಿಸಲಾಗಿದ್ದ ಅಪಾರ ಮೌಲ್ಯದ ಹನಿ ನೀರಾವರಿ ಪೈಪುಗಳು ಹಾಗೂ ಟೊಮೇಟೊ ಕಡ್ಡಿಗಳು ಬೆಂಕಿಗಾಹುತಿಯಾಗಿವೆ. ಈ ಅವಘಡದಿಂದ ರೈತರಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ನೀರು, ಮಣ್ಣು ಬಳಸಿ ಬೆಂಕಿ ನಂದಿಸಲು ಯತ್ನಿಸಿದರೂ, ಬಿಸಿಲಿನ ತೀವ್ರತೆ, ಒಣಹವಾಮಾನ ಹಾಗೂ ಗಾಳಿಯ ವೇಗದಿಂದಾಗಿ ಬೆಂಕಿ ಇನ್ನಷ್ಟು ವ್ಯಾಪಿಸಿಕೊಂಡಿದೆ. ಪರಿಸ್ಥಿತಿ ಕೈ ಮೀರುವುದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರೂ, ಅಷ್ಟರೊಳಗೆ ಬಹುತೇಕ ಕೃಷಿ ಸಾಮಗ್ರಿಗಳು ಭಸ್ಮವಾಗಿದ್ದರಿಂದ ನಷ್ಟ ತಪ್ಪಿಸಲು ಸಾಧ್ಯವಾಗಲಿಲ್ಲ. ನಂತರ ಬೆಂಕಿ ಇನ್ನಷ್ಟು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಯಿತು.
ರೈತ ವೆಂಕಟಪ್ಪ ಅವರ ಕುಟುಂಬಕ್ಕೆ ರಾಗಿ ಹುಲ್ಲು, ಹಲಸಿನ ಕಾಯಿ ಹಾಗೂ ಟೊಮೇಟೊ ಬೆಳೆ ಮುಖ್ಯ ಆದಾಯದ ಮೂಲವಾಗಿತ್ತು. ಇಂತಹ ಸಂದರ್ಭದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವರ ಜೀವನಾಧಾರಕ್ಕೆ ಭಾರೀ ಹೊಡೆತ ನೀಡಿದೆ. ಮುಂದಿನ ಬೆಳೆಗಾಗಿ ಬಳಸಲು ಸಂಗ್ರಹಿಸಿದ್ದ ಹುಲ್ಲು ಹಾಗೂ ನೀರಾವರಿ ವ್ಯವಸ್ಥೆ ನಾಶವಾದುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಗ್ರಾಮಸ್ಥರು ಹಾಗೂ ರೈತ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ವೇಳೆ ಯುವ ಮುಖಂಡ ಉದಯ ಆರಾಧ್ಯ ಮಾತಾನಾಡಿ, ಆಕಸ್ಮಿಕ ಬೆಂಕಿಯಿಂದ ಸಂಪೂರ್ಣ ನಷ್ಟಕ್ಕೆ ಒಳಗಾದ ರೈತ ವೆಂಕಟಪ್ಪ ಅವರಿಗೆ ತಕ್ಷಣ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು, ಜೊತೆಗೆ ಹಾನಿಯ ಸಮೀಕ್ಷೆ ನಡೆಸಿ ಪರಿಹಾರ ಮೊತ್ತ ಘೋಷಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಿದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…
ಬೆಂಗಳೂರು: ಹಬ್ಬಗಳ ಸೀಸನ್ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…
ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…
ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…