ಆಕಾಸ ಏರ್‌ ವಿಮಾನ ಸಂಸ್ಥೆಯಿಂದ ವಿಶೇಷ ಔತಣ ಕೊಡುಗೆ ಘೋಷಣೆ

ಬೆಂಗಳೂರು: ಆಕಾಸ ಏರ್‌ ವಿಮಾನ ಸಂಸ್ಥೆಯು ಪ್ರಯಾಣಿಕರಿಗೆ ವಿಶೇಷ ಔತಣದ ಮೇಲೆ ಕೊಡುಗೆ ಘೋಷಣೆ ಮಾಡಿದೆ.

ವಿಮಾನದಲ್ಲಿ ವಿಶೇಷ ಭೋಜನ ಮಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ, ಕೆಲವೊಮ್ಮೆ ನಮಗೆ ಹೊಂದಿಕೆಯಾಗದ ಆಹಾರ ಇರುವ ಕಾರಣ ಭೋಜನ ಸೇವಿಸದೇ ಪ್ರಯಾಣ ಮಾಡಿರುತ್ತೇವೆ. ಅದಕ್ಕಾಗಿಯೇ ಆಕಾಸ ಏರ್‌, ವಿಶೇಷ ಔತಣದ ಕೊಡುಗೆ ನೀಡಿದೆ.

ಈ ವಿಶೇಷ ಔತಣದಲ್ಲಿ ಆಲೂ ಟಿಕ್ಕಿ ಹಾಗೂ ಖಾರದ ರಗ್ಡಾ, ನಮಕ್ ಪಾರಾ ಮತ್ತು ಕಾಜು ಕಟ್ಲಿ ಸಿಹಿ ತಿಂಡಿ ಹಾಗೂ ಪ್ರಯಾಣಿಕರ ಆಯ್ಕೆಯ ಪಾನೀಯವನ್ನು ಒದಗಿಸಲಾಗುತ್ತದೆ. ಈ ಕೊಡುಗೆಯು ನವೆಂಬರ್ 30 ರ ವರೆಗೆ ಆಕಾಸ ಏರ್‌ ನೆಟ್‌ವರ್ಕ್‌ನಲ್ಲಿ ಒದಗಿಸಲಾಗುತ್ತದೆ. ಈ ಸ್ಪೆಷಲ್ ಔತಣವನ್ನು ಆಕಾಸ ಏರ್ ವೆಬ್‌ಸೈಟ್ www.akasaair.com ಹಾಗೂ ಮೊಬೈಲ್ ಆಪ್‌ನಲ್ಲಿ ಪ್ರೀ ಬುಕ್ ಮಾಡಬಹುದಾಗಿದೆ.

2022 ಆಗಸ್ಟ್‌ನಲ್ಲಿ ಬಿಡುಗಡೆ ಮಾಡಿದಾಗಿನಿಂದಲೂ ಆಕಾಸ ಏರ್‌ ವಿಶೇಷವಾಗಿ ಕ್ಯುರೇಟ್ ಮಾಡಿದ ಊಟದ ಆಯ್ಕೆಗಳನ್ನು ಒದಗಿಸುತ್ತಿದ್ದು, ಆಚರಣೆಗಳಿಗೆ ಸೂಕ್ತವಾದ ಪ್ರಾದೇಶಿಕ ವಿಶೇಷತೆಯನ್ನೂ ಇದು ಪ್ರತಿನಿಧಿಸಯತ್ತದೆ. ಮಕರ ಸಂಕ್ರಾಂತಿಯಿಂದ ವ್ಯಾಲಂಟೈನ್ಸ್‌ ಡೇ, ಹೋಳಿ, ಈದ್, ತಾಯಂದಿರ ದಿನ, ಅಂತಾರಾಷ್ಟ್ರೀಯ ಯೋಗ ದಿನ, ಮಾನ್ಸೂನ್‌ ಸೀಸನ್‌, ನವ್‌ರೋಝ್‌, ಓಣಮ್, ಗಣೇಶ ಚತುರ್ಥಿ, ದಸರಾ, ದೀಪಾವಳಿ ಮತ್ತು ಕ್ರಿಸ್‌ಮಸ್‌ ಸಮಯದಲ್ಲಿ ಈ ವಿಶೇಷ ಊಟವನ್ನು ಒದಗಿಸುತ್ತದೆ. ಹಬ್ಬದ ಊಟಗಳ ಜೊತೆಗೆ ಹಾರಾಟದ ಅನುಭವವನ್ನೂ ಉತ್ತಮವಾಗಿ ಒದಗಿಸುವುದನ್ನು ಕೆಫೆ ಆಕಾಸ ಮುಂದುವರಿಸಲಿದೆ. ರೆಗ್ಯುಲರ್ ಮೆನುವಿನಲ್ಲಿ ಕೇಕ್‌ಗಳ ಪ್ರೀ ಸೆಲೆಕ್ಷನ್ ಅನ್ನೂ ಇದು ಒದಗಿಸುತ್ತಿದ್ದು, ತಮ್ಮ ಪ್ರೀತಿ ಪಾತ್ರರ ಜನ್ಮ ದಿನಾಚರಣೆಗಳನ್ನು ಆಕಾಶದಲ್ಲೇ ಆಚರಣೆ ಮಾಡಲು ಅನುವು ಮಾಡಿಕೊಡುತ್ತದೆ.

ಕೆಫೆ ಆಕಾಸ ಆಗಾಗ್ಗೆ ತನ್ನ ಮೆನುವನ್ನು ರಿಫ್ರೆಶ್ ಮಾಡುತ್ತಿರುತ್ತದೆ. ವಿವಿಧ ಗುರ್ಮೆ ಊಟಗಳು, ತಿಂಡಿ ತಿನಿಸುಗಳನ್ನು ಹಾಗೂ ರಿಫ್ರೆಶ್ ಮಾಡುವ ಪಾನೀಯಗಳನ್ನೂ ಇದರಲ್ಲಿ ಸೇರಿಸುತ್ತದೆ. ಎಲ್ಲ ವಿಧದ ಆಹಾರ ಪದ್ಧತಿಯವರಿಗೂ ಸೂಕ್ತವಾಗುವಂತೆ ಇದು ಇರುತ್ತದೆ. ಮೆನುವಿನಲ್ಲಿ 45 ಕ್ಕೂ ಹೆಚ್ಚು ಊಟದ ಆಯ್ಕೆಗಳಿವೆ. ಫ್ಯೂಷನ್ ಮೀಲ್ಸ್, ಆಪಟೈಸರ್ಸ್‌ ಜೊತೆಗೆ ಪ್ರಾದೇಶಿಕ ವೈವಿಧ್ಯತೆ, ರುಚಿಕರ ಡೆಸರ್ಟ್‌ಗಳು ಮತ್ತು ಜನಪ್ರಿಯ ಶೆಫ್‌ಗಳು ವಿಶೇಷವಾಗಿ ಕ್ಯುರೇಟ್ ಮಾಡಿದ ತಿನಿಸುಗಳು ಕೂಡಾ ಇದರಲ್ಲಿ ಇರಲಿದೆ.

Ramesh Babu

Journalist

Recent Posts

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

3 hours ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

3 hours ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

13 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

14 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

14 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

18 hours ago