ಆಕಾಸ ಏರ್‌ ವಿಮಾನ ಸಂಸ್ಥೆಯಿಂದ ವಿಶೇಷ ಔತಣ ಕೊಡುಗೆ ಘೋಷಣೆ

ಬೆಂಗಳೂರು: ಆಕಾಸ ಏರ್‌ ವಿಮಾನ ಸಂಸ್ಥೆಯು ಪ್ರಯಾಣಿಕರಿಗೆ ವಿಶೇಷ ಔತಣದ ಮೇಲೆ ಕೊಡುಗೆ ಘೋಷಣೆ ಮಾಡಿದೆ.

ವಿಮಾನದಲ್ಲಿ ವಿಶೇಷ ಭೋಜನ ಮಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ, ಕೆಲವೊಮ್ಮೆ ನಮಗೆ ಹೊಂದಿಕೆಯಾಗದ ಆಹಾರ ಇರುವ ಕಾರಣ ಭೋಜನ ಸೇವಿಸದೇ ಪ್ರಯಾಣ ಮಾಡಿರುತ್ತೇವೆ. ಅದಕ್ಕಾಗಿಯೇ ಆಕಾಸ ಏರ್‌, ವಿಶೇಷ ಔತಣದ ಕೊಡುಗೆ ನೀಡಿದೆ.

ಈ ವಿಶೇಷ ಔತಣದಲ್ಲಿ ಆಲೂ ಟಿಕ್ಕಿ ಹಾಗೂ ಖಾರದ ರಗ್ಡಾ, ನಮಕ್ ಪಾರಾ ಮತ್ತು ಕಾಜು ಕಟ್ಲಿ ಸಿಹಿ ತಿಂಡಿ ಹಾಗೂ ಪ್ರಯಾಣಿಕರ ಆಯ್ಕೆಯ ಪಾನೀಯವನ್ನು ಒದಗಿಸಲಾಗುತ್ತದೆ. ಈ ಕೊಡುಗೆಯು ನವೆಂಬರ್ 30 ರ ವರೆಗೆ ಆಕಾಸ ಏರ್‌ ನೆಟ್‌ವರ್ಕ್‌ನಲ್ಲಿ ಒದಗಿಸಲಾಗುತ್ತದೆ. ಈ ಸ್ಪೆಷಲ್ ಔತಣವನ್ನು ಆಕಾಸ ಏರ್ ವೆಬ್‌ಸೈಟ್ www.akasaair.com ಹಾಗೂ ಮೊಬೈಲ್ ಆಪ್‌ನಲ್ಲಿ ಪ್ರೀ ಬುಕ್ ಮಾಡಬಹುದಾಗಿದೆ.

2022 ಆಗಸ್ಟ್‌ನಲ್ಲಿ ಬಿಡುಗಡೆ ಮಾಡಿದಾಗಿನಿಂದಲೂ ಆಕಾಸ ಏರ್‌ ವಿಶೇಷವಾಗಿ ಕ್ಯುರೇಟ್ ಮಾಡಿದ ಊಟದ ಆಯ್ಕೆಗಳನ್ನು ಒದಗಿಸುತ್ತಿದ್ದು, ಆಚರಣೆಗಳಿಗೆ ಸೂಕ್ತವಾದ ಪ್ರಾದೇಶಿಕ ವಿಶೇಷತೆಯನ್ನೂ ಇದು ಪ್ರತಿನಿಧಿಸಯತ್ತದೆ. ಮಕರ ಸಂಕ್ರಾಂತಿಯಿಂದ ವ್ಯಾಲಂಟೈನ್ಸ್‌ ಡೇ, ಹೋಳಿ, ಈದ್, ತಾಯಂದಿರ ದಿನ, ಅಂತಾರಾಷ್ಟ್ರೀಯ ಯೋಗ ದಿನ, ಮಾನ್ಸೂನ್‌ ಸೀಸನ್‌, ನವ್‌ರೋಝ್‌, ಓಣಮ್, ಗಣೇಶ ಚತುರ್ಥಿ, ದಸರಾ, ದೀಪಾವಳಿ ಮತ್ತು ಕ್ರಿಸ್‌ಮಸ್‌ ಸಮಯದಲ್ಲಿ ಈ ವಿಶೇಷ ಊಟವನ್ನು ಒದಗಿಸುತ್ತದೆ. ಹಬ್ಬದ ಊಟಗಳ ಜೊತೆಗೆ ಹಾರಾಟದ ಅನುಭವವನ್ನೂ ಉತ್ತಮವಾಗಿ ಒದಗಿಸುವುದನ್ನು ಕೆಫೆ ಆಕಾಸ ಮುಂದುವರಿಸಲಿದೆ. ರೆಗ್ಯುಲರ್ ಮೆನುವಿನಲ್ಲಿ ಕೇಕ್‌ಗಳ ಪ್ರೀ ಸೆಲೆಕ್ಷನ್ ಅನ್ನೂ ಇದು ಒದಗಿಸುತ್ತಿದ್ದು, ತಮ್ಮ ಪ್ರೀತಿ ಪಾತ್ರರ ಜನ್ಮ ದಿನಾಚರಣೆಗಳನ್ನು ಆಕಾಶದಲ್ಲೇ ಆಚರಣೆ ಮಾಡಲು ಅನುವು ಮಾಡಿಕೊಡುತ್ತದೆ.

ಕೆಫೆ ಆಕಾಸ ಆಗಾಗ್ಗೆ ತನ್ನ ಮೆನುವನ್ನು ರಿಫ್ರೆಶ್ ಮಾಡುತ್ತಿರುತ್ತದೆ. ವಿವಿಧ ಗುರ್ಮೆ ಊಟಗಳು, ತಿಂಡಿ ತಿನಿಸುಗಳನ್ನು ಹಾಗೂ ರಿಫ್ರೆಶ್ ಮಾಡುವ ಪಾನೀಯಗಳನ್ನೂ ಇದರಲ್ಲಿ ಸೇರಿಸುತ್ತದೆ. ಎಲ್ಲ ವಿಧದ ಆಹಾರ ಪದ್ಧತಿಯವರಿಗೂ ಸೂಕ್ತವಾಗುವಂತೆ ಇದು ಇರುತ್ತದೆ. ಮೆನುವಿನಲ್ಲಿ 45 ಕ್ಕೂ ಹೆಚ್ಚು ಊಟದ ಆಯ್ಕೆಗಳಿವೆ. ಫ್ಯೂಷನ್ ಮೀಲ್ಸ್, ಆಪಟೈಸರ್ಸ್‌ ಜೊತೆಗೆ ಪ್ರಾದೇಶಿಕ ವೈವಿಧ್ಯತೆ, ರುಚಿಕರ ಡೆಸರ್ಟ್‌ಗಳು ಮತ್ತು ಜನಪ್ರಿಯ ಶೆಫ್‌ಗಳು ವಿಶೇಷವಾಗಿ ಕ್ಯುರೇಟ್ ಮಾಡಿದ ತಿನಿಸುಗಳು ಕೂಡಾ ಇದರಲ್ಲಿ ಇರಲಿದೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

9 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

10 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago