ಆಕಾಸ ಏರ್‌ ವಿಮಾನ ಸಂಸ್ಥೆಯಿಂದ ವಿಶೇಷ ಔತಣ ಕೊಡುಗೆ ಘೋಷಣೆ

ಬೆಂಗಳೂರು: ಆಕಾಸ ಏರ್‌ ವಿಮಾನ ಸಂಸ್ಥೆಯು ಪ್ರಯಾಣಿಕರಿಗೆ ವಿಶೇಷ ಔತಣದ ಮೇಲೆ ಕೊಡುಗೆ ಘೋಷಣೆ ಮಾಡಿದೆ.

ವಿಮಾನದಲ್ಲಿ ವಿಶೇಷ ಭೋಜನ ಮಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ, ಕೆಲವೊಮ್ಮೆ ನಮಗೆ ಹೊಂದಿಕೆಯಾಗದ ಆಹಾರ ಇರುವ ಕಾರಣ ಭೋಜನ ಸೇವಿಸದೇ ಪ್ರಯಾಣ ಮಾಡಿರುತ್ತೇವೆ. ಅದಕ್ಕಾಗಿಯೇ ಆಕಾಸ ಏರ್‌, ವಿಶೇಷ ಔತಣದ ಕೊಡುಗೆ ನೀಡಿದೆ.

ಈ ವಿಶೇಷ ಔತಣದಲ್ಲಿ ಆಲೂ ಟಿಕ್ಕಿ ಹಾಗೂ ಖಾರದ ರಗ್ಡಾ, ನಮಕ್ ಪಾರಾ ಮತ್ತು ಕಾಜು ಕಟ್ಲಿ ಸಿಹಿ ತಿಂಡಿ ಹಾಗೂ ಪ್ರಯಾಣಿಕರ ಆಯ್ಕೆಯ ಪಾನೀಯವನ್ನು ಒದಗಿಸಲಾಗುತ್ತದೆ. ಈ ಕೊಡುಗೆಯು ನವೆಂಬರ್ 30 ರ ವರೆಗೆ ಆಕಾಸ ಏರ್‌ ನೆಟ್‌ವರ್ಕ್‌ನಲ್ಲಿ ಒದಗಿಸಲಾಗುತ್ತದೆ. ಈ ಸ್ಪೆಷಲ್ ಔತಣವನ್ನು ಆಕಾಸ ಏರ್ ವೆಬ್‌ಸೈಟ್ www.akasaair.com ಹಾಗೂ ಮೊಬೈಲ್ ಆಪ್‌ನಲ್ಲಿ ಪ್ರೀ ಬುಕ್ ಮಾಡಬಹುದಾಗಿದೆ.

2022 ಆಗಸ್ಟ್‌ನಲ್ಲಿ ಬಿಡುಗಡೆ ಮಾಡಿದಾಗಿನಿಂದಲೂ ಆಕಾಸ ಏರ್‌ ವಿಶೇಷವಾಗಿ ಕ್ಯುರೇಟ್ ಮಾಡಿದ ಊಟದ ಆಯ್ಕೆಗಳನ್ನು ಒದಗಿಸುತ್ತಿದ್ದು, ಆಚರಣೆಗಳಿಗೆ ಸೂಕ್ತವಾದ ಪ್ರಾದೇಶಿಕ ವಿಶೇಷತೆಯನ್ನೂ ಇದು ಪ್ರತಿನಿಧಿಸಯತ್ತದೆ. ಮಕರ ಸಂಕ್ರಾಂತಿಯಿಂದ ವ್ಯಾಲಂಟೈನ್ಸ್‌ ಡೇ, ಹೋಳಿ, ಈದ್, ತಾಯಂದಿರ ದಿನ, ಅಂತಾರಾಷ್ಟ್ರೀಯ ಯೋಗ ದಿನ, ಮಾನ್ಸೂನ್‌ ಸೀಸನ್‌, ನವ್‌ರೋಝ್‌, ಓಣಮ್, ಗಣೇಶ ಚತುರ್ಥಿ, ದಸರಾ, ದೀಪಾವಳಿ ಮತ್ತು ಕ್ರಿಸ್‌ಮಸ್‌ ಸಮಯದಲ್ಲಿ ಈ ವಿಶೇಷ ಊಟವನ್ನು ಒದಗಿಸುತ್ತದೆ. ಹಬ್ಬದ ಊಟಗಳ ಜೊತೆಗೆ ಹಾರಾಟದ ಅನುಭವವನ್ನೂ ಉತ್ತಮವಾಗಿ ಒದಗಿಸುವುದನ್ನು ಕೆಫೆ ಆಕಾಸ ಮುಂದುವರಿಸಲಿದೆ. ರೆಗ್ಯುಲರ್ ಮೆನುವಿನಲ್ಲಿ ಕೇಕ್‌ಗಳ ಪ್ರೀ ಸೆಲೆಕ್ಷನ್ ಅನ್ನೂ ಇದು ಒದಗಿಸುತ್ತಿದ್ದು, ತಮ್ಮ ಪ್ರೀತಿ ಪಾತ್ರರ ಜನ್ಮ ದಿನಾಚರಣೆಗಳನ್ನು ಆಕಾಶದಲ್ಲೇ ಆಚರಣೆ ಮಾಡಲು ಅನುವು ಮಾಡಿಕೊಡುತ್ತದೆ.

ಕೆಫೆ ಆಕಾಸ ಆಗಾಗ್ಗೆ ತನ್ನ ಮೆನುವನ್ನು ರಿಫ್ರೆಶ್ ಮಾಡುತ್ತಿರುತ್ತದೆ. ವಿವಿಧ ಗುರ್ಮೆ ಊಟಗಳು, ತಿಂಡಿ ತಿನಿಸುಗಳನ್ನು ಹಾಗೂ ರಿಫ್ರೆಶ್ ಮಾಡುವ ಪಾನೀಯಗಳನ್ನೂ ಇದರಲ್ಲಿ ಸೇರಿಸುತ್ತದೆ. ಎಲ್ಲ ವಿಧದ ಆಹಾರ ಪದ್ಧತಿಯವರಿಗೂ ಸೂಕ್ತವಾಗುವಂತೆ ಇದು ಇರುತ್ತದೆ. ಮೆನುವಿನಲ್ಲಿ 45 ಕ್ಕೂ ಹೆಚ್ಚು ಊಟದ ಆಯ್ಕೆಗಳಿವೆ. ಫ್ಯೂಷನ್ ಮೀಲ್ಸ್, ಆಪಟೈಸರ್ಸ್‌ ಜೊತೆಗೆ ಪ್ರಾದೇಶಿಕ ವೈವಿಧ್ಯತೆ, ರುಚಿಕರ ಡೆಸರ್ಟ್‌ಗಳು ಮತ್ತು ಜನಪ್ರಿಯ ಶೆಫ್‌ಗಳು ವಿಶೇಷವಾಗಿ ಕ್ಯುರೇಟ್ ಮಾಡಿದ ತಿನಿಸುಗಳು ಕೂಡಾ ಇದರಲ್ಲಿ ಇರಲಿದೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

3 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

13 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

14 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago