ಆಕ್ಸಿಡೆಂಟ್ ಝೋನ್ ಗಳಲ್ಲಿ ವೇಗ ನಿಯಂತ್ರಕ ಹಂಪ್ ಅಳವಡಿಕೆಗೆ ಚಿಂತನೆ: ಸಂಚಾರಿ ನಿಯಮ‌ ಗಾಳಿಗೆ ತೂರಿ ವಾಹನ ಚಲಾಯಿಸಿದರೆ ದಂಡ, ಶಿಕ್ಷೆ ಗ್ಯಾರೆಂಟಿ- ನಗರ ಪೊಲೀಸ್ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ಎಚ್ಚರಿಕೆ

ಇತ್ತೀಚೆಗೆ ನಗರದಲ್ಲಿ ಒಂದಿಲ್ಲೊಂದು ಅಪಘಾತಗಳು ಸಂಭವಿಸಿ ಆನೇಕ ಸಾವು-ನೋವುಗಳು ಕಂಡುಬರುತ್ತಿವೆ. ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಲು ಅಪಘಾತಗಳು ಹೆಚ್ಚಾಗಿ ಆಗುವ ಸ್ಥಳಗಳಿಗೆ ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಹಾಗೂ ಪಿಡಬ್ಲ್ಯೂಡಿ ಇಂಜಿನಿಯರ್ ಪುರುಷೋತ್ತಮ ಅವರು ಭೇಟಿ ನೀಡಿ ಪರಿಶೀಲಿಸಿ, ಅಪಘಾತ ನಡೆಯದಂತೆ ತಡೆಯಲು ಯಾವೆಲ್ಲಾ ಮುನ್ನೆಚ್ಚರಿಕೆ‌ ಕ್ರಮಗಳನ್ನು ಅಳವಡಿಸಬೇಕು ಎಂದು ಸಮಾಲೋಚಿಸಿದರು.

ನಾಗರಕೆರೆ ರಸ್ತೆ, ಶಾಂತಿನಗರ ರಸ್ತೆ, ಒಕ್ಕಲಿಗರ ಭವನ ಮುಂಭಾಗ, ಎಪಿಎಂಸಿ ಯಾರ್ಡ್ ಮುಖ್ಯದ್ವಾರದ ಮುಂದೆ ಮತ್ತು ಸರ್ಕಾರಿ ಆಸ್ಪತ್ರೆ ಮುಂಭಾಗದ ರಸ್ತೆಗಳಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿದ್ದು, ಈ ಸ್ಥಳಗಳನ್ನು ಆಕ್ಸಿಡೆಂಟ್ ಝೋನ್ ಎಂದು ಪರಿಗಣಿಸಿ ಈ‌ ಸ್ಥಳಗಳಲ್ಲಿ ಹಂಪ್, ಸೂಚನಾ ಫಲಕಗಳು ಸೇರಿದಂತೆ ಇತರೆ ಸಂಚಾರ ಸೂಚನಾ ಫಲಗಳನ್ನು ಅಳವಡಿಸಲು ಚಿಂತಿಸಲಾಗಿದೆ.

ಇನ್ನು ಮುಂದೆ ನಗರದಲ್ಲಿ ವಾಹನ ಚಲಾಯಿಸುವವರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕು, ವೀಲಿಂಗ್ ಮಾಡುವುದು, ಮನಸೋಇಚ್ಛೆ ತಮಗೆ ಇಷ್ಟ ಬಂದ ಕಡೆ ವಾಹನ ತಿರುಗಿಸುವುದು, ತಪ್ಪು ದಾರಿಯಲ್ಲಿ ವಾಹನ ಚಲಾಯಿಸುವುದು, ಹೆಲ್ಮೆಟ್ ಇಲ್ಲದೇ ಬೈಕ್ ಓಡಿಸುವುದು, ಸೀಟ್ ಬೆಲ್ಟ್ ಇಲ್ಲದೇ ಕಾರು ಚಲಾಯಿಸುವುದು, ತ್ರಿಬಲ್ ರೈಡಿಂಗ್, ಅಪ್ರಾಪ್ತ ವಯಸ್ಕರು ವಾಹನ ಓಡಿಸುವುದು, ಡಿಎಲ್, ಎಲ್ ಎಲ್ ಇಲ್ಲದೇ ಬೈಕ್, ಕಾರು ಸೇರಿದಂತೆ ಇತರೆ ವಾಹನಗಳನ್ನು ಓಡಿಸುವುದು ಸೇರಿದಂತೆ ಇತರೆ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಲಾಯಿಸಿದರೆ ಕಡ್ಡಾಯವಾಗಿ ದಂಡ, ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

4 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

4 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

5 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

6 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

8 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

15 hours ago