ಆಕ್ಸಿಡೆಂಟ್ ಝೋನ್ ಗಳಲ್ಲಿ ವೇಗ ನಿಯಂತ್ರಕ ಹಂಪ್ ಅಳವಡಿಕೆಗೆ ಚಿಂತನೆ: ಸಂಚಾರಿ ನಿಯಮ‌ ಗಾಳಿಗೆ ತೂರಿ ವಾಹನ ಚಲಾಯಿಸಿದರೆ ದಂಡ, ಶಿಕ್ಷೆ ಗ್ಯಾರೆಂಟಿ- ನಗರ ಪೊಲೀಸ್ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ಎಚ್ಚರಿಕೆ

ಇತ್ತೀಚೆಗೆ ನಗರದಲ್ಲಿ ಒಂದಿಲ್ಲೊಂದು ಅಪಘಾತಗಳು ಸಂಭವಿಸಿ ಆನೇಕ ಸಾವು-ನೋವುಗಳು ಕಂಡುಬರುತ್ತಿವೆ. ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಲು ಅಪಘಾತಗಳು ಹೆಚ್ಚಾಗಿ ಆಗುವ ಸ್ಥಳಗಳಿಗೆ ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಹಾಗೂ ಪಿಡಬ್ಲ್ಯೂಡಿ ಇಂಜಿನಿಯರ್ ಪುರುಷೋತ್ತಮ ಅವರು ಭೇಟಿ ನೀಡಿ ಪರಿಶೀಲಿಸಿ, ಅಪಘಾತ ನಡೆಯದಂತೆ ತಡೆಯಲು ಯಾವೆಲ್ಲಾ ಮುನ್ನೆಚ್ಚರಿಕೆ‌ ಕ್ರಮಗಳನ್ನು ಅಳವಡಿಸಬೇಕು ಎಂದು ಸಮಾಲೋಚಿಸಿದರು.

ನಾಗರಕೆರೆ ರಸ್ತೆ, ಶಾಂತಿನಗರ ರಸ್ತೆ, ಒಕ್ಕಲಿಗರ ಭವನ ಮುಂಭಾಗ, ಎಪಿಎಂಸಿ ಯಾರ್ಡ್ ಮುಖ್ಯದ್ವಾರದ ಮುಂದೆ ಮತ್ತು ಸರ್ಕಾರಿ ಆಸ್ಪತ್ರೆ ಮುಂಭಾಗದ ರಸ್ತೆಗಳಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿದ್ದು, ಈ ಸ್ಥಳಗಳನ್ನು ಆಕ್ಸಿಡೆಂಟ್ ಝೋನ್ ಎಂದು ಪರಿಗಣಿಸಿ ಈ‌ ಸ್ಥಳಗಳಲ್ಲಿ ಹಂಪ್, ಸೂಚನಾ ಫಲಕಗಳು ಸೇರಿದಂತೆ ಇತರೆ ಸಂಚಾರ ಸೂಚನಾ ಫಲಗಳನ್ನು ಅಳವಡಿಸಲು ಚಿಂತಿಸಲಾಗಿದೆ.

ಇನ್ನು ಮುಂದೆ ನಗರದಲ್ಲಿ ವಾಹನ ಚಲಾಯಿಸುವವರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕು, ವೀಲಿಂಗ್ ಮಾಡುವುದು, ಮನಸೋಇಚ್ಛೆ ತಮಗೆ ಇಷ್ಟ ಬಂದ ಕಡೆ ವಾಹನ ತಿರುಗಿಸುವುದು, ತಪ್ಪು ದಾರಿಯಲ್ಲಿ ವಾಹನ ಚಲಾಯಿಸುವುದು, ಹೆಲ್ಮೆಟ್ ಇಲ್ಲದೇ ಬೈಕ್ ಓಡಿಸುವುದು, ಸೀಟ್ ಬೆಲ್ಟ್ ಇಲ್ಲದೇ ಕಾರು ಚಲಾಯಿಸುವುದು, ತ್ರಿಬಲ್ ರೈಡಿಂಗ್, ಅಪ್ರಾಪ್ತ ವಯಸ್ಕರು ವಾಹನ ಓಡಿಸುವುದು, ಡಿಎಲ್, ಎಲ್ ಎಲ್ ಇಲ್ಲದೇ ಬೈಕ್, ಕಾರು ಸೇರಿದಂತೆ ಇತರೆ ವಾಹನಗಳನ್ನು ಓಡಿಸುವುದು ಸೇರಿದಂತೆ ಇತರೆ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಲಾಯಿಸಿದರೆ ಕಡ್ಡಾಯವಾಗಿ ದಂಡ, ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

2 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

3 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

4 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

8 hours ago