ಆಕ್ಸಿಡೆಂಟ್ ಝೋನ್ ಗಳಲ್ಲಿ ವೇಗ ನಿಯಂತ್ರಕ ಹಂಪ್ ಅಳವಡಿಕೆಗೆ ಚಿಂತನೆ: ಸಂಚಾರಿ ನಿಯಮ‌ ಗಾಳಿಗೆ ತೂರಿ ವಾಹನ ಚಲಾಯಿಸಿದರೆ ದಂಡ, ಶಿಕ್ಷೆ ಗ್ಯಾರೆಂಟಿ- ನಗರ ಪೊಲೀಸ್ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ಎಚ್ಚರಿಕೆ

ಇತ್ತೀಚೆಗೆ ನಗರದಲ್ಲಿ ಒಂದಿಲ್ಲೊಂದು ಅಪಘಾತಗಳು ಸಂಭವಿಸಿ ಆನೇಕ ಸಾವು-ನೋವುಗಳು ಕಂಡುಬರುತ್ತಿವೆ. ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಲು ಅಪಘಾತಗಳು ಹೆಚ್ಚಾಗಿ ಆಗುವ ಸ್ಥಳಗಳಿಗೆ ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಹಾಗೂ ಪಿಡಬ್ಲ್ಯೂಡಿ ಇಂಜಿನಿಯರ್ ಪುರುಷೋತ್ತಮ ಅವರು ಭೇಟಿ ನೀಡಿ ಪರಿಶೀಲಿಸಿ, ಅಪಘಾತ ನಡೆಯದಂತೆ ತಡೆಯಲು ಯಾವೆಲ್ಲಾ ಮುನ್ನೆಚ್ಚರಿಕೆ‌ ಕ್ರಮಗಳನ್ನು ಅಳವಡಿಸಬೇಕು ಎಂದು ಸಮಾಲೋಚಿಸಿದರು.

ನಾಗರಕೆರೆ ರಸ್ತೆ, ಶಾಂತಿನಗರ ರಸ್ತೆ, ಒಕ್ಕಲಿಗರ ಭವನ ಮುಂಭಾಗ, ಎಪಿಎಂಸಿ ಯಾರ್ಡ್ ಮುಖ್ಯದ್ವಾರದ ಮುಂದೆ ಮತ್ತು ಸರ್ಕಾರಿ ಆಸ್ಪತ್ರೆ ಮುಂಭಾಗದ ರಸ್ತೆಗಳಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿದ್ದು, ಈ ಸ್ಥಳಗಳನ್ನು ಆಕ್ಸಿಡೆಂಟ್ ಝೋನ್ ಎಂದು ಪರಿಗಣಿಸಿ ಈ‌ ಸ್ಥಳಗಳಲ್ಲಿ ಹಂಪ್, ಸೂಚನಾ ಫಲಕಗಳು ಸೇರಿದಂತೆ ಇತರೆ ಸಂಚಾರ ಸೂಚನಾ ಫಲಗಳನ್ನು ಅಳವಡಿಸಲು ಚಿಂತಿಸಲಾಗಿದೆ.

ಇನ್ನು ಮುಂದೆ ನಗರದಲ್ಲಿ ವಾಹನ ಚಲಾಯಿಸುವವರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕು, ವೀಲಿಂಗ್ ಮಾಡುವುದು, ಮನಸೋಇಚ್ಛೆ ತಮಗೆ ಇಷ್ಟ ಬಂದ ಕಡೆ ವಾಹನ ತಿರುಗಿಸುವುದು, ತಪ್ಪು ದಾರಿಯಲ್ಲಿ ವಾಹನ ಚಲಾಯಿಸುವುದು, ಹೆಲ್ಮೆಟ್ ಇಲ್ಲದೇ ಬೈಕ್ ಓಡಿಸುವುದು, ಸೀಟ್ ಬೆಲ್ಟ್ ಇಲ್ಲದೇ ಕಾರು ಚಲಾಯಿಸುವುದು, ತ್ರಿಬಲ್ ರೈಡಿಂಗ್, ಅಪ್ರಾಪ್ತ ವಯಸ್ಕರು ವಾಹನ ಓಡಿಸುವುದು, ಡಿಎಲ್, ಎಲ್ ಎಲ್ ಇಲ್ಲದೇ ಬೈಕ್, ಕಾರು ಸೇರಿದಂತೆ ಇತರೆ ವಾಹನಗಳನ್ನು ಓಡಿಸುವುದು ಸೇರಿದಂತೆ ಇತರೆ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಲಾಯಿಸಿದರೆ ಕಡ್ಡಾಯವಾಗಿ ದಂಡ, ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

1 hour ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago