ಆಕ್ಸಿಡೆಂಟ್ ಝೋನ್ ಗಳಲ್ಲಿ ವೇಗ ನಿಯಂತ್ರಕ ಹಂಪ್ ಅಳವಡಿಕೆಗೆ ಚಿಂತನೆ: ಸಂಚಾರಿ ನಿಯಮ‌ ಗಾಳಿಗೆ ತೂರಿ ವಾಹನ ಚಲಾಯಿಸಿದರೆ ದಂಡ, ಶಿಕ್ಷೆ ಗ್ಯಾರೆಂಟಿ- ನಗರ ಪೊಲೀಸ್ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ಎಚ್ಚರಿಕೆ

ಇತ್ತೀಚೆಗೆ ನಗರದಲ್ಲಿ ಒಂದಿಲ್ಲೊಂದು ಅಪಘಾತಗಳು ಸಂಭವಿಸಿ ಆನೇಕ ಸಾವು-ನೋವುಗಳು ಕಂಡುಬರುತ್ತಿವೆ. ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಲು ಅಪಘಾತಗಳು ಹೆಚ್ಚಾಗಿ ಆಗುವ ಸ್ಥಳಗಳಿಗೆ ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಹಾಗೂ ಪಿಡಬ್ಲ್ಯೂಡಿ ಇಂಜಿನಿಯರ್ ಪುರುಷೋತ್ತಮ ಅವರು ಭೇಟಿ ನೀಡಿ ಪರಿಶೀಲಿಸಿ, ಅಪಘಾತ ನಡೆಯದಂತೆ ತಡೆಯಲು ಯಾವೆಲ್ಲಾ ಮುನ್ನೆಚ್ಚರಿಕೆ‌ ಕ್ರಮಗಳನ್ನು ಅಳವಡಿಸಬೇಕು ಎಂದು ಸಮಾಲೋಚಿಸಿದರು.

ನಾಗರಕೆರೆ ರಸ್ತೆ, ಶಾಂತಿನಗರ ರಸ್ತೆ, ಒಕ್ಕಲಿಗರ ಭವನ ಮುಂಭಾಗ, ಎಪಿಎಂಸಿ ಯಾರ್ಡ್ ಮುಖ್ಯದ್ವಾರದ ಮುಂದೆ ಮತ್ತು ಸರ್ಕಾರಿ ಆಸ್ಪತ್ರೆ ಮುಂಭಾಗದ ರಸ್ತೆಗಳಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿದ್ದು, ಈ ಸ್ಥಳಗಳನ್ನು ಆಕ್ಸಿಡೆಂಟ್ ಝೋನ್ ಎಂದು ಪರಿಗಣಿಸಿ ಈ‌ ಸ್ಥಳಗಳಲ್ಲಿ ಹಂಪ್, ಸೂಚನಾ ಫಲಕಗಳು ಸೇರಿದಂತೆ ಇತರೆ ಸಂಚಾರ ಸೂಚನಾ ಫಲಗಳನ್ನು ಅಳವಡಿಸಲು ಚಿಂತಿಸಲಾಗಿದೆ.

ಇನ್ನು ಮುಂದೆ ನಗರದಲ್ಲಿ ವಾಹನ ಚಲಾಯಿಸುವವರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕು, ವೀಲಿಂಗ್ ಮಾಡುವುದು, ಮನಸೋಇಚ್ಛೆ ತಮಗೆ ಇಷ್ಟ ಬಂದ ಕಡೆ ವಾಹನ ತಿರುಗಿಸುವುದು, ತಪ್ಪು ದಾರಿಯಲ್ಲಿ ವಾಹನ ಚಲಾಯಿಸುವುದು, ಹೆಲ್ಮೆಟ್ ಇಲ್ಲದೇ ಬೈಕ್ ಓಡಿಸುವುದು, ಸೀಟ್ ಬೆಲ್ಟ್ ಇಲ್ಲದೇ ಕಾರು ಚಲಾಯಿಸುವುದು, ತ್ರಿಬಲ್ ರೈಡಿಂಗ್, ಅಪ್ರಾಪ್ತ ವಯಸ್ಕರು ವಾಹನ ಓಡಿಸುವುದು, ಡಿಎಲ್, ಎಲ್ ಎಲ್ ಇಲ್ಲದೇ ಬೈಕ್, ಕಾರು ಸೇರಿದಂತೆ ಇತರೆ ವಾಹನಗಳನ್ನು ಓಡಿಸುವುದು ಸೇರಿದಂತೆ ಇತರೆ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಲಾಯಿಸಿದರೆ ಕಡ್ಡಾಯವಾಗಿ ದಂಡ, ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

4 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

17 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

17 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

20 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

21 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago