ಆಕ್ಸಿಯಮ್-4 ಮಿಷನ್(Axiom-4): ಬಾಹ್ಯಾಕಾಶಕ್ಕೆ ಹಾರಿದ ಕ್ಯಾಪ್ಟನ್ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್-4 ಮಿಷನ್(Axiom-4) ಇಂದು ಬುಧವಾರ ಭಾರತೀಯ ಕಾಲಮಾನ ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಯಶಸ್ವಿಯಾಗಿ ಚಿಮ್ಮಿದೆ.

28 ಗಂಟೆಗಳ ಪ್ರಯಾಣದ ನಂತರ, ಬಾಹ್ಯಾಕಾಶ ನೌಕೆ ನಾಳೆ ಗುರುವಾರ ಸಂಜೆ 4:30 (IST) ಸುಮಾರಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ನೊಂದಿಗೆ ಡಾಕ್ ಆಗುವ ನಿರೀಕ್ಷೆಯಿದೆ. ಗಗನಯಾತ್ರಿಗಳು ಬಾಹ್ಯಾಕಾಶ ನೌಕೆ ನಿಲ್ದಾಣದಲ್ಲಿ ಸುಮಾರು 14 ದಿನಗಳನ್ನು ಕಳೆಯಲಿದ್ದಾರೆ.

ನಾಸಾದ ಮಾಜಿ ಗಗನಯಾತ್ರಿ ಮತ್ತು ಆಕ್ಸಿಯಮ್ ಸ್ಪೇಸ್‌ನಲ್ಲಿ ಮಾನವ ಬಾಹ್ಯಾಕಾಶ ಹಾರಾಟದ ನಿರ್ದೇಶಕಿ ಪೆಗ್ಗಿ ವಿಟ್ಸನ್ ಈ ವಾಣಿಜ್ಯ ಕಾರ್ಯಾಚರಣೆಯನ್ನು ಮುನ್ನಡೆಸಿದ್ದಾರೆ. ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಗಗನಯಾತ್ರಿ ಶುಭಾನ್ಶು ಶುಕ್ಲಾ ಪೈಲಟ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇಬ್ಬರು ಮಿಷನ್ ತಜ್ಞರು ಪೋಲೆಂಡ್‌ನ ಇಎಸ್‌ಎ (ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ) ಯೋಜನೆಯ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮತ್ತು ಹಂಗೇರಿಯ ಹುನೋರ್ (ಹಂಗೇರಿಯನ್ ಟು ಆರ್ಬಿಟ್) ಗಗನಯಾತ್ರಿ ಟಿಬೋರ್ ಕಾಪು ಆಗಿದ್ದಾರೆ.

ನಮಸ್ಕಾರ, ನನ್ನ ಪ್ರೀತಿಯ ದೇಶವಾಸಿಗಳೇ!” ಎಂದು ಸ್ಪೇಸ್‌ ಎಕ್ಸ್‌ನ ಕ್ರೂಡ್ರಾಗನ್‌ನಲ್ಲಿ ಉಡಾವಣೆಯಾದ ಸುಮಾರು 10 ನಿಮಿಷಗಳ ನಂತರ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ದೇಶವಾಸಿಗಳನ್ನುದ್ದೇಶಿಸಿ ಸಂದೇಶ ಕಳುಹಿಸಿದ್ದಾರೆ..

“ನಾವು 41 ವರ್ಷಗಳ ನಂತರ ಬಾಹ್ಯಾಕಾಶ ತಲುಪಿದ್ದೇವೆ. ನಾವು ಸೆಕೆಂಡಿಗೆ ಸುಮಾರು 7.5 ಕಿಮೀನಷ್ಟು ಭೂಮಿಯ ಸುತ್ತ ಸುತ್ತುತ್ತಿದ್ದೇವೆ. ನನ್ನ ಭುಜದ ಮೇಲೆ ಭಾರತೀಯ ತ್ರಿವರ್ಣವಿದೆ. ನಾನು ಈ ಪಯಣದಲ್ಲಿ ನಿಮ್ಮೆಲ್ಲರೊಂದಿಗಿದ್ದೇನೆ ಇದು ಐಎಸ್‌ಎಸ್‌ಗೆ ನನ್ನ ಪ್ರಯಾಣದ ಆರಂಭ ಮಾತ್ರವಲ್ಲ, ಭಾರತದ ಮಾನವ ಬಾಹ್ಯಾಕಾಶ ಹಾರಾಟದ ಯುಗದ ಆರಂಭವೂ ಆಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ಈ ಪ್ರಯಾಣದ ಭಾಗವಾಗಬೇಕೆಂದು ನಾನು ಬಯಸುತ್ತೇನೆ, ನಾವು ಭಾರತದ ಮಾನವ ಬಾಹ್ಯಾಕಾಶ ಕಾರ್ಯಕ್ರಮವನ್ನು ಒಟ್ಟಿಗೆ ಪ್ರಾರಂಭಿಸೋಣ.” ಎಂದು ಹೇಳಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

3 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

14 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

15 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

15 hours ago

ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ…

15 hours ago