ಆಕ್ಸಿಯಮ್-4 ಮಿಷನ್(Axiom-4): ಬಾಹ್ಯಾಕಾಶಕ್ಕೆ ಹಾರಿದ ಕ್ಯಾಪ್ಟನ್ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್-4 ಮಿಷನ್(Axiom-4) ಇಂದು ಬುಧವಾರ ಭಾರತೀಯ ಕಾಲಮಾನ ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಯಶಸ್ವಿಯಾಗಿ ಚಿಮ್ಮಿದೆ.

28 ಗಂಟೆಗಳ ಪ್ರಯಾಣದ ನಂತರ, ಬಾಹ್ಯಾಕಾಶ ನೌಕೆ ನಾಳೆ ಗುರುವಾರ ಸಂಜೆ 4:30 (IST) ಸುಮಾರಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ನೊಂದಿಗೆ ಡಾಕ್ ಆಗುವ ನಿರೀಕ್ಷೆಯಿದೆ. ಗಗನಯಾತ್ರಿಗಳು ಬಾಹ್ಯಾಕಾಶ ನೌಕೆ ನಿಲ್ದಾಣದಲ್ಲಿ ಸುಮಾರು 14 ದಿನಗಳನ್ನು ಕಳೆಯಲಿದ್ದಾರೆ.

ನಾಸಾದ ಮಾಜಿ ಗಗನಯಾತ್ರಿ ಮತ್ತು ಆಕ್ಸಿಯಮ್ ಸ್ಪೇಸ್‌ನಲ್ಲಿ ಮಾನವ ಬಾಹ್ಯಾಕಾಶ ಹಾರಾಟದ ನಿರ್ದೇಶಕಿ ಪೆಗ್ಗಿ ವಿಟ್ಸನ್ ಈ ವಾಣಿಜ್ಯ ಕಾರ್ಯಾಚರಣೆಯನ್ನು ಮುನ್ನಡೆಸಿದ್ದಾರೆ. ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಗಗನಯಾತ್ರಿ ಶುಭಾನ್ಶು ಶುಕ್ಲಾ ಪೈಲಟ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇಬ್ಬರು ಮಿಷನ್ ತಜ್ಞರು ಪೋಲೆಂಡ್‌ನ ಇಎಸ್‌ಎ (ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ) ಯೋಜನೆಯ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮತ್ತು ಹಂಗೇರಿಯ ಹುನೋರ್ (ಹಂಗೇರಿಯನ್ ಟು ಆರ್ಬಿಟ್) ಗಗನಯಾತ್ರಿ ಟಿಬೋರ್ ಕಾಪು ಆಗಿದ್ದಾರೆ.

ನಮಸ್ಕಾರ, ನನ್ನ ಪ್ರೀತಿಯ ದೇಶವಾಸಿಗಳೇ!” ಎಂದು ಸ್ಪೇಸ್‌ ಎಕ್ಸ್‌ನ ಕ್ರೂಡ್ರಾಗನ್‌ನಲ್ಲಿ ಉಡಾವಣೆಯಾದ ಸುಮಾರು 10 ನಿಮಿಷಗಳ ನಂತರ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ದೇಶವಾಸಿಗಳನ್ನುದ್ದೇಶಿಸಿ ಸಂದೇಶ ಕಳುಹಿಸಿದ್ದಾರೆ..

“ನಾವು 41 ವರ್ಷಗಳ ನಂತರ ಬಾಹ್ಯಾಕಾಶ ತಲುಪಿದ್ದೇವೆ. ನಾವು ಸೆಕೆಂಡಿಗೆ ಸುಮಾರು 7.5 ಕಿಮೀನಷ್ಟು ಭೂಮಿಯ ಸುತ್ತ ಸುತ್ತುತ್ತಿದ್ದೇವೆ. ನನ್ನ ಭುಜದ ಮೇಲೆ ಭಾರತೀಯ ತ್ರಿವರ್ಣವಿದೆ. ನಾನು ಈ ಪಯಣದಲ್ಲಿ ನಿಮ್ಮೆಲ್ಲರೊಂದಿಗಿದ್ದೇನೆ ಇದು ಐಎಸ್‌ಎಸ್‌ಗೆ ನನ್ನ ಪ್ರಯಾಣದ ಆರಂಭ ಮಾತ್ರವಲ್ಲ, ಭಾರತದ ಮಾನವ ಬಾಹ್ಯಾಕಾಶ ಹಾರಾಟದ ಯುಗದ ಆರಂಭವೂ ಆಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ಈ ಪ್ರಯಾಣದ ಭಾಗವಾಗಬೇಕೆಂದು ನಾನು ಬಯಸುತ್ತೇನೆ, ನಾವು ಭಾರತದ ಮಾನವ ಬಾಹ್ಯಾಕಾಶ ಕಾರ್ಯಕ್ರಮವನ್ನು ಒಟ್ಟಿಗೆ ಪ್ರಾರಂಭಿಸೋಣ.” ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

7 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

11 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

11 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

16 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago