ಆಕ್ಸಿಯಮ್-4 ಮಿಷನ್(Axiom-4): ಬಾಹ್ಯಾಕಾಶಕ್ಕೆ ಹಾರಿದ ಕ್ಯಾಪ್ಟನ್ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್-4 ಮಿಷನ್(Axiom-4) ಇಂದು ಬುಧವಾರ ಭಾರತೀಯ ಕಾಲಮಾನ ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಯಶಸ್ವಿಯಾಗಿ ಚಿಮ್ಮಿದೆ.

28 ಗಂಟೆಗಳ ಪ್ರಯಾಣದ ನಂತರ, ಬಾಹ್ಯಾಕಾಶ ನೌಕೆ ನಾಳೆ ಗುರುವಾರ ಸಂಜೆ 4:30 (IST) ಸುಮಾರಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ನೊಂದಿಗೆ ಡಾಕ್ ಆಗುವ ನಿರೀಕ್ಷೆಯಿದೆ. ಗಗನಯಾತ್ರಿಗಳು ಬಾಹ್ಯಾಕಾಶ ನೌಕೆ ನಿಲ್ದಾಣದಲ್ಲಿ ಸುಮಾರು 14 ದಿನಗಳನ್ನು ಕಳೆಯಲಿದ್ದಾರೆ.

ನಾಸಾದ ಮಾಜಿ ಗಗನಯಾತ್ರಿ ಮತ್ತು ಆಕ್ಸಿಯಮ್ ಸ್ಪೇಸ್‌ನಲ್ಲಿ ಮಾನವ ಬಾಹ್ಯಾಕಾಶ ಹಾರಾಟದ ನಿರ್ದೇಶಕಿ ಪೆಗ್ಗಿ ವಿಟ್ಸನ್ ಈ ವಾಣಿಜ್ಯ ಕಾರ್ಯಾಚರಣೆಯನ್ನು ಮುನ್ನಡೆಸಿದ್ದಾರೆ. ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಗಗನಯಾತ್ರಿ ಶುಭಾನ್ಶು ಶುಕ್ಲಾ ಪೈಲಟ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇಬ್ಬರು ಮಿಷನ್ ತಜ್ಞರು ಪೋಲೆಂಡ್‌ನ ಇಎಸ್‌ಎ (ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ) ಯೋಜನೆಯ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮತ್ತು ಹಂಗೇರಿಯ ಹುನೋರ್ (ಹಂಗೇರಿಯನ್ ಟು ಆರ್ಬಿಟ್) ಗಗನಯಾತ್ರಿ ಟಿಬೋರ್ ಕಾಪು ಆಗಿದ್ದಾರೆ.

ನಮಸ್ಕಾರ, ನನ್ನ ಪ್ರೀತಿಯ ದೇಶವಾಸಿಗಳೇ!” ಎಂದು ಸ್ಪೇಸ್‌ ಎಕ್ಸ್‌ನ ಕ್ರೂಡ್ರಾಗನ್‌ನಲ್ಲಿ ಉಡಾವಣೆಯಾದ ಸುಮಾರು 10 ನಿಮಿಷಗಳ ನಂತರ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ದೇಶವಾಸಿಗಳನ್ನುದ್ದೇಶಿಸಿ ಸಂದೇಶ ಕಳುಹಿಸಿದ್ದಾರೆ..

“ನಾವು 41 ವರ್ಷಗಳ ನಂತರ ಬಾಹ್ಯಾಕಾಶ ತಲುಪಿದ್ದೇವೆ. ನಾವು ಸೆಕೆಂಡಿಗೆ ಸುಮಾರು 7.5 ಕಿಮೀನಷ್ಟು ಭೂಮಿಯ ಸುತ್ತ ಸುತ್ತುತ್ತಿದ್ದೇವೆ. ನನ್ನ ಭುಜದ ಮೇಲೆ ಭಾರತೀಯ ತ್ರಿವರ್ಣವಿದೆ. ನಾನು ಈ ಪಯಣದಲ್ಲಿ ನಿಮ್ಮೆಲ್ಲರೊಂದಿಗಿದ್ದೇನೆ ಇದು ಐಎಸ್‌ಎಸ್‌ಗೆ ನನ್ನ ಪ್ರಯಾಣದ ಆರಂಭ ಮಾತ್ರವಲ್ಲ, ಭಾರತದ ಮಾನವ ಬಾಹ್ಯಾಕಾಶ ಹಾರಾಟದ ಯುಗದ ಆರಂಭವೂ ಆಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ಈ ಪ್ರಯಾಣದ ಭಾಗವಾಗಬೇಕೆಂದು ನಾನು ಬಯಸುತ್ತೇನೆ, ನಾವು ಭಾರತದ ಮಾನವ ಬಾಹ್ಯಾಕಾಶ ಕಾರ್ಯಕ್ರಮವನ್ನು ಒಟ್ಟಿಗೆ ಪ್ರಾರಂಭಿಸೋಣ.” ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

12 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

22 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

22 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago