ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್-4 ಮಿಷನ್(Axiom-4) ಇಂದು ಬುಧವಾರ ಭಾರತೀಯ ಕಾಲಮಾನ ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಯಶಸ್ವಿಯಾಗಿ ಚಿಮ್ಮಿದೆ.
28 ಗಂಟೆಗಳ ಪ್ರಯಾಣದ ನಂತರ, ಬಾಹ್ಯಾಕಾಶ ನೌಕೆ ನಾಳೆ ಗುರುವಾರ ಸಂಜೆ 4:30 (IST) ಸುಮಾರಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ನೊಂದಿಗೆ ಡಾಕ್ ಆಗುವ ನಿರೀಕ್ಷೆಯಿದೆ. ಗಗನಯಾತ್ರಿಗಳು ಬಾಹ್ಯಾಕಾಶ ನೌಕೆ ನಿಲ್ದಾಣದಲ್ಲಿ ಸುಮಾರು 14 ದಿನಗಳನ್ನು ಕಳೆಯಲಿದ್ದಾರೆ.
ನಾಸಾದ ಮಾಜಿ ಗಗನಯಾತ್ರಿ ಮತ್ತು ಆಕ್ಸಿಯಮ್ ಸ್ಪೇಸ್ನಲ್ಲಿ ಮಾನವ ಬಾಹ್ಯಾಕಾಶ ಹಾರಾಟದ ನಿರ್ದೇಶಕಿ ಪೆಗ್ಗಿ ವಿಟ್ಸನ್ ಈ ವಾಣಿಜ್ಯ ಕಾರ್ಯಾಚರಣೆಯನ್ನು ಮುನ್ನಡೆಸಿದ್ದಾರೆ. ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಗಗನಯಾತ್ರಿ ಶುಭಾನ್ಶು ಶುಕ್ಲಾ ಪೈಲಟ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇಬ್ಬರು ಮಿಷನ್ ತಜ್ಞರು ಪೋಲೆಂಡ್ನ ಇಎಸ್ಎ (ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ) ಯೋಜನೆಯ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮತ್ತು ಹಂಗೇರಿಯ ಹುನೋರ್ (ಹಂಗೇರಿಯನ್ ಟು ಆರ್ಬಿಟ್) ಗಗನಯಾತ್ರಿ ಟಿಬೋರ್ ಕಾಪು ಆಗಿದ್ದಾರೆ.
ನಮಸ್ಕಾರ, ನನ್ನ ಪ್ರೀತಿಯ ದೇಶವಾಸಿಗಳೇ!” ಎಂದು ಸ್ಪೇಸ್ ಎಕ್ಸ್ನ ಕ್ರೂಡ್ರಾಗನ್ನಲ್ಲಿ ಉಡಾವಣೆಯಾದ ಸುಮಾರು 10 ನಿಮಿಷಗಳ ನಂತರ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ದೇಶವಾಸಿಗಳನ್ನುದ್ದೇಶಿಸಿ ಸಂದೇಶ ಕಳುಹಿಸಿದ್ದಾರೆ..
“ನಾವು 41 ವರ್ಷಗಳ ನಂತರ ಬಾಹ್ಯಾಕಾಶ ತಲುಪಿದ್ದೇವೆ. ನಾವು ಸೆಕೆಂಡಿಗೆ ಸುಮಾರು 7.5 ಕಿಮೀನಷ್ಟು ಭೂಮಿಯ ಸುತ್ತ ಸುತ್ತುತ್ತಿದ್ದೇವೆ. ನನ್ನ ಭುಜದ ಮೇಲೆ ಭಾರತೀಯ ತ್ರಿವರ್ಣವಿದೆ. ನಾನು ಈ ಪಯಣದಲ್ಲಿ ನಿಮ್ಮೆಲ್ಲರೊಂದಿಗಿದ್ದೇನೆ ಇದು ಐಎಸ್ಎಸ್ಗೆ ನನ್ನ ಪ್ರಯಾಣದ ಆರಂಭ ಮಾತ್ರವಲ್ಲ, ಭಾರತದ ಮಾನವ ಬಾಹ್ಯಾಕಾಶ ಹಾರಾಟದ ಯುಗದ ಆರಂಭವೂ ಆಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ಈ ಪ್ರಯಾಣದ ಭಾಗವಾಗಬೇಕೆಂದು ನಾನು ಬಯಸುತ್ತೇನೆ, ನಾವು ಭಾರತದ ಮಾನವ ಬಾಹ್ಯಾಕಾಶ ಕಾರ್ಯಕ್ರಮವನ್ನು ಒಟ್ಟಿಗೆ ಪ್ರಾರಂಭಿಸೋಣ.” ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…