ಆಕ್ಸಿಯಮ್-4 ಮಿಷನ್(Axiom-4): ಬಾಹ್ಯಾಕಾಶಕ್ಕೆ ಹಾರಿದ ಕ್ಯಾಪ್ಟನ್ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್-4 ಮಿಷನ್(Axiom-4) ಇಂದು ಬುಧವಾರ ಭಾರತೀಯ ಕಾಲಮಾನ ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಯಶಸ್ವಿಯಾಗಿ ಚಿಮ್ಮಿದೆ.

28 ಗಂಟೆಗಳ ಪ್ರಯಾಣದ ನಂತರ, ಬಾಹ್ಯಾಕಾಶ ನೌಕೆ ನಾಳೆ ಗುರುವಾರ ಸಂಜೆ 4:30 (IST) ಸುಮಾರಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ನೊಂದಿಗೆ ಡಾಕ್ ಆಗುವ ನಿರೀಕ್ಷೆಯಿದೆ. ಗಗನಯಾತ್ರಿಗಳು ಬಾಹ್ಯಾಕಾಶ ನೌಕೆ ನಿಲ್ದಾಣದಲ್ಲಿ ಸುಮಾರು 14 ದಿನಗಳನ್ನು ಕಳೆಯಲಿದ್ದಾರೆ.

ನಾಸಾದ ಮಾಜಿ ಗಗನಯಾತ್ರಿ ಮತ್ತು ಆಕ್ಸಿಯಮ್ ಸ್ಪೇಸ್‌ನಲ್ಲಿ ಮಾನವ ಬಾಹ್ಯಾಕಾಶ ಹಾರಾಟದ ನಿರ್ದೇಶಕಿ ಪೆಗ್ಗಿ ವಿಟ್ಸನ್ ಈ ವಾಣಿಜ್ಯ ಕಾರ್ಯಾಚರಣೆಯನ್ನು ಮುನ್ನಡೆಸಿದ್ದಾರೆ. ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಗಗನಯಾತ್ರಿ ಶುಭಾನ್ಶು ಶುಕ್ಲಾ ಪೈಲಟ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇಬ್ಬರು ಮಿಷನ್ ತಜ್ಞರು ಪೋಲೆಂಡ್‌ನ ಇಎಸ್‌ಎ (ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ) ಯೋಜನೆಯ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮತ್ತು ಹಂಗೇರಿಯ ಹುನೋರ್ (ಹಂಗೇರಿಯನ್ ಟು ಆರ್ಬಿಟ್) ಗಗನಯಾತ್ರಿ ಟಿಬೋರ್ ಕಾಪು ಆಗಿದ್ದಾರೆ.

ನಮಸ್ಕಾರ, ನನ್ನ ಪ್ರೀತಿಯ ದೇಶವಾಸಿಗಳೇ!” ಎಂದು ಸ್ಪೇಸ್‌ ಎಕ್ಸ್‌ನ ಕ್ರೂಡ್ರಾಗನ್‌ನಲ್ಲಿ ಉಡಾವಣೆಯಾದ ಸುಮಾರು 10 ನಿಮಿಷಗಳ ನಂತರ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ದೇಶವಾಸಿಗಳನ್ನುದ್ದೇಶಿಸಿ ಸಂದೇಶ ಕಳುಹಿಸಿದ್ದಾರೆ..

“ನಾವು 41 ವರ್ಷಗಳ ನಂತರ ಬಾಹ್ಯಾಕಾಶ ತಲುಪಿದ್ದೇವೆ. ನಾವು ಸೆಕೆಂಡಿಗೆ ಸುಮಾರು 7.5 ಕಿಮೀನಷ್ಟು ಭೂಮಿಯ ಸುತ್ತ ಸುತ್ತುತ್ತಿದ್ದೇವೆ. ನನ್ನ ಭುಜದ ಮೇಲೆ ಭಾರತೀಯ ತ್ರಿವರ್ಣವಿದೆ. ನಾನು ಈ ಪಯಣದಲ್ಲಿ ನಿಮ್ಮೆಲ್ಲರೊಂದಿಗಿದ್ದೇನೆ ಇದು ಐಎಸ್‌ಎಸ್‌ಗೆ ನನ್ನ ಪ್ರಯಾಣದ ಆರಂಭ ಮಾತ್ರವಲ್ಲ, ಭಾರತದ ಮಾನವ ಬಾಹ್ಯಾಕಾಶ ಹಾರಾಟದ ಯುಗದ ಆರಂಭವೂ ಆಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ಈ ಪ್ರಯಾಣದ ಭಾಗವಾಗಬೇಕೆಂದು ನಾನು ಬಯಸುತ್ತೇನೆ, ನಾವು ಭಾರತದ ಮಾನವ ಬಾಹ್ಯಾಕಾಶ ಕಾರ್ಯಕ್ರಮವನ್ನು ಒಟ್ಟಿಗೆ ಪ್ರಾರಂಭಿಸೋಣ.” ಎಂದು ಹೇಳಿದ್ದಾರೆ.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

38 minutes ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

47 minutes ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

6 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

15 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago