ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಘಾತಕಾರಿ ಜಾಲವೊಂದು ಬೆಳಕಿಗೆ ಬಂದಿದ್ದು, ಆಗಷ್ಟೇ ಋತುಮತಿಯಾದ ಯುವತಿಯರನ್ನು ಲೈಂಗಿಕ ಕೃತ್ಯಗಳಿಗೆ ಪೂರೈಸುತ್ತಿದ್ದ ಭಯಾನಕ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಗೆ ಮೈಸೂರಿನ ಒಡನಾಡಿ ಸಂಸ್ಥೆ ಸಾಥ್ ನೀಡಿದೆ ಎಂಬ ಕೂಗು ಕೇಳಿಬಂದಿದೆ.
ಮೈಸೂರು ಪೊಲೀಸರ ಬಂಧನದಲ್ಲಿರುವ ಆರೋಪಿಗಳು ಹೇಳಿಕೊಂಡಿರುವಂತೆ, ತಮ್ಮ ಸಮಾಜದಲ್ಲಿ ಋತುಮತಿಯಾದ ಬಾಲಕಿಯರ ಜೊತೆ ಮೊದಲ ಲೈಂಗಿಕ ಸಂಪರ್ಕ ನಡೆಸುವುದರಿಂದ ಮಾನಸಿಕ ಕಾಯಿಲೆಗಳು, ಲೈಂಗಿಕ ಕಾಯಿಲೆಗಳು ದೂರ ಆಗುತ್ತವೆ ಎಂಬುದು ನಂಬಿಕೆ. ಹೀಗಾಗಿ ಮೊದಲ ಬಾರಿ ಋತುಮತಿಯಾದ ಬಾಲಕಿಯರನ್ನು ಲೈಂಗಿಕ ಕೃತ್ಯಕ್ಕೆ ಪೂರೈಸುತ್ತಿದ್ದೆವು ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಋತುಮತಿಯರಾದ ಯುವತಿಯರಿಗೆ ದುಬಾರಿ ಐಫೋನ್, ಬ್ರಾಂಡೆಡ್ ಬಟ್ಟೆಗಳ ಆಸೆ ತೋರಿಸಿ ಅವರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಒಡನಾಡಿ ಸಂಸ್ಥೆ ಕಲೆ ಹಾಕಿದ್ದು, ಗ್ರಾಹಕರ ಸೋಗಿನಲ್ಲಿ ಆರೋಪಿಗಳನ್ನ ಸಂಪರ್ಕಿಸಿ ಖಚಿತಪಡಿಸಿಕೊಂಡಿದೆ. ಆ ಬಳಿಕ ಮೈಸೂರಿನ ವಿಜಯನಗರ ಪೊಲೀಸರು & ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…
ದೊಡ್ಡಬಳ್ಳಾಪುರದ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ…