ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಘಾತಕಾರಿ ಜಾಲವೊಂದು ಬೆಳಕಿಗೆ ಬಂದಿದ್ದು, ಆಗಷ್ಟೇ ಋತುಮತಿಯಾದ ಯುವತಿಯರನ್ನು ಲೈಂಗಿಕ ಕೃತ್ಯಗಳಿಗೆ ಪೂರೈಸುತ್ತಿದ್ದ ಭಯಾನಕ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಗೆ ಮೈಸೂರಿನ ಒಡನಾಡಿ ಸಂಸ್ಥೆ ಸಾಥ್ ನೀಡಿದೆ ಎಂಬ ಕೂಗು ಕೇಳಿಬಂದಿದೆ.
ಮೈಸೂರು ಪೊಲೀಸರ ಬಂಧನದಲ್ಲಿರುವ ಆರೋಪಿಗಳು ಹೇಳಿಕೊಂಡಿರುವಂತೆ, ತಮ್ಮ ಸಮಾಜದಲ್ಲಿ ಋತುಮತಿಯಾದ ಬಾಲಕಿಯರ ಜೊತೆ ಮೊದಲ ಲೈಂಗಿಕ ಸಂಪರ್ಕ ನಡೆಸುವುದರಿಂದ ಮಾನಸಿಕ ಕಾಯಿಲೆಗಳು, ಲೈಂಗಿಕ ಕಾಯಿಲೆಗಳು ದೂರ ಆಗುತ್ತವೆ ಎಂಬುದು ನಂಬಿಕೆ. ಹೀಗಾಗಿ ಮೊದಲ ಬಾರಿ ಋತುಮತಿಯಾದ ಬಾಲಕಿಯರನ್ನು ಲೈಂಗಿಕ ಕೃತ್ಯಕ್ಕೆ ಪೂರೈಸುತ್ತಿದ್ದೆವು ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಋತುಮತಿಯರಾದ ಯುವತಿಯರಿಗೆ ದುಬಾರಿ ಐಫೋನ್, ಬ್ರಾಂಡೆಡ್ ಬಟ್ಟೆಗಳ ಆಸೆ ತೋರಿಸಿ ಅವರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಒಡನಾಡಿ ಸಂಸ್ಥೆ ಕಲೆ ಹಾಕಿದ್ದು, ಗ್ರಾಹಕರ ಸೋಗಿನಲ್ಲಿ ಆರೋಪಿಗಳನ್ನ ಸಂಪರ್ಕಿಸಿ ಖಚಿತಪಡಿಸಿಕೊಂಡಿದೆ. ಆ ಬಳಿಕ ಮೈಸೂರಿನ ವಿಜಯನಗರ ಪೊಲೀಸರು & ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…
ಬೆಂಗಳೂರು: ಹಬ್ಬಗಳ ಸೀಸನ್ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…
ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…
ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…