Categories: ಮೈಸೂರು

ಆಗಷ್ಟೇ ಋತುಮತಿಯಾದ ಯುವತಿಯರನ್ನು ಲೈಂಗಿಕ ಕೃತ್ಯಕ್ಕೆ ಪೂರೈಕೆ: ಇಬ್ಬರು ಆರೋಪಿಗಳ ಬಂಧನ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಘಾತಕಾರಿ ಜಾಲವೊಂದು ಬೆಳಕಿಗೆ ಬಂದಿದ್ದು, ಆಗಷ್ಟೇ ಋತುಮತಿಯಾದ ಯುವತಿಯರನ್ನು ಲೈಂಗಿಕ ಕೃತ್ಯಗಳಿಗೆ ಪೂರೈಸುತ್ತಿದ್ದ ಭಯಾನಕ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಗೆ ಮೈಸೂರಿನ ಒಡನಾಡಿ ಸಂಸ್ಥೆ ಸಾಥ್ ನೀಡಿದೆ ಎಂಬ ಕೂಗು ಕೇಳಿಬಂದಿದೆ.

ಮೈಸೂರು ಪೊಲೀಸರ ಬಂಧನದಲ್ಲಿರುವ ಆರೋಪಿಗಳು ಹೇಳಿಕೊಂಡಿರುವಂತೆ, ತಮ್ಮ ಸಮಾಜದಲ್ಲಿ ಋತುಮತಿಯಾದ ಬಾಲಕಿಯರ ಜೊತೆ ಮೊದಲ ಲೈಂಗಿಕ ಸಂಪರ್ಕ ನಡೆಸುವುದರಿಂದ ಮಾನಸಿಕ ಕಾಯಿಲೆಗಳು, ಲೈಂಗಿಕ ಕಾಯಿಲೆಗಳು ದೂರ ಆಗುತ್ತವೆ ಎಂಬುದು ನಂಬಿಕೆ. ಹೀಗಾಗಿ ಮೊದಲ ಬಾರಿ ಋತುಮತಿಯಾದ ಬಾಲಕಿಯರನ್ನು ಲೈಂಗಿಕ ಕೃತ್ಯಕ್ಕೆ ಪೂರೈಸುತ್ತಿದ್ದೆವು ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಋತುಮತಿಯರಾದ ಯುವತಿಯರಿಗೆ ದುಬಾರಿ ಐಫೋನ್, ಬ್ರಾಂಡೆಡ್ ಬಟ್ಟೆಗಳ ಆಸೆ ತೋರಿಸಿ ಅವರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಒಡನಾಡಿ ಸಂಸ್ಥೆ ಕಲೆ ಹಾಕಿದ್ದು, ಗ್ರಾಹಕರ ಸೋಗಿನಲ್ಲಿ ಆರೋಪಿಗಳನ್ನ ಸಂಪರ್ಕಿಸಿ ಖಚಿತಪಡಿಸಿಕೊಂಡಿದೆ. ಆ ಬಳಿಕ ಮೈಸೂರಿನ ವಿಜಯನಗರ ಪೊಲೀಸರು & ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Ramesh Babu

Journalist

Recent Posts

ಹಣದ ಹರಿವು

ಹೊರಹೋಗುವ ಸುಲಭ ದಾರಿಗಳು, ಒಳಬರುವ ಕಠಿಣ ಹಾದಿಗಳು....... ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು...... ಆಧುನಿಕತೆ…

42 minutes ago

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

18 hours ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

1 day ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

3 days ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

3 days ago