ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಘಾತಕಾರಿ ಜಾಲವೊಂದು ಬೆಳಕಿಗೆ ಬಂದಿದ್ದು, ಆಗಷ್ಟೇ ಋತುಮತಿಯಾದ ಯುವತಿಯರನ್ನು ಲೈಂಗಿಕ ಕೃತ್ಯಗಳಿಗೆ ಪೂರೈಸುತ್ತಿದ್ದ ಭಯಾನಕ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಗೆ ಮೈಸೂರಿನ ಒಡನಾಡಿ ಸಂಸ್ಥೆ ಸಾಥ್ ನೀಡಿದೆ ಎಂಬ ಕೂಗು ಕೇಳಿಬಂದಿದೆ.
ಮೈಸೂರು ಪೊಲೀಸರ ಬಂಧನದಲ್ಲಿರುವ ಆರೋಪಿಗಳು ಹೇಳಿಕೊಂಡಿರುವಂತೆ, ತಮ್ಮ ಸಮಾಜದಲ್ಲಿ ಋತುಮತಿಯಾದ ಬಾಲಕಿಯರ ಜೊತೆ ಮೊದಲ ಲೈಂಗಿಕ ಸಂಪರ್ಕ ನಡೆಸುವುದರಿಂದ ಮಾನಸಿಕ ಕಾಯಿಲೆಗಳು, ಲೈಂಗಿಕ ಕಾಯಿಲೆಗಳು ದೂರ ಆಗುತ್ತವೆ ಎಂಬುದು ನಂಬಿಕೆ. ಹೀಗಾಗಿ ಮೊದಲ ಬಾರಿ ಋತುಮತಿಯಾದ ಬಾಲಕಿಯರನ್ನು ಲೈಂಗಿಕ ಕೃತ್ಯಕ್ಕೆ ಪೂರೈಸುತ್ತಿದ್ದೆವು ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಋತುಮತಿಯರಾದ ಯುವತಿಯರಿಗೆ ದುಬಾರಿ ಐಫೋನ್, ಬ್ರಾಂಡೆಡ್ ಬಟ್ಟೆಗಳ ಆಸೆ ತೋರಿಸಿ ಅವರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಒಡನಾಡಿ ಸಂಸ್ಥೆ ಕಲೆ ಹಾಕಿದ್ದು, ಗ್ರಾಹಕರ ಸೋಗಿನಲ್ಲಿ ಆರೋಪಿಗಳನ್ನ ಸಂಪರ್ಕಿಸಿ ಖಚಿತಪಡಿಸಿಕೊಂಡಿದೆ. ಆ ಬಳಿಕ ಮೈಸೂರಿನ ವಿಜಯನಗರ ಪೊಲೀಸರು & ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…