ಆಗಸ್ಟ್ 05 ರಿಂದ ಉಪ ಲೋಕಾಯುಕ್ತರ ಜಿಲ್ಲಾ ಪ್ರವಾಸ: ಸಾರ್ವಜನಿಕರ ಕುಂದುಕೊರತೆ ಆಲಿಸಿ: ಅರ್ಜಿ ಸ್ವೀಕಾರ

ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ಗೌರವಾನ್ವಿತ ಕೆ.ಎನ್. ಫಣೀಂದ್ರ ಅವರು 2023 ರ ಆಗಸ್ಟ್ 05 ರಿಂದ 08 ರ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವುದು, ದೂರು/ಅರ್ಜಿಗಳನ್ನು ಸ್ವೀಕರಿಸುವುದು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಬಾಕಿ ಇರುವ ದೂರುಗಳ ವಿಚಾರಣೆ ಮತ್ತು ವಿಲೇವಾರಿ ಮಾಡಲಿದ್ದಾರೆ.

2023 ರ ಆಗಸ್ಟ್ 05 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 01:30 ಗಂಟೆಯವರೆಗೆ ವರೆಗೆ ಮತ್ತು ಮಧ್ಯಾಹ್ನ 2:30 ಗಂಟೆಯಿಂದ ರಿಂದ 5:00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ.

ನಂತರ ಸಂಜೆ 5:30 ಗಂಟೆಯಿಂದ 6:30 ಗಂಟೆಯವರೆಗೆ ಕರ್ನಾಟಕ ರಾಜ್ಯ ಮಟ್ಟದ ಸೇವಾ ಪ್ರಾಧಿಕಾರ ಸಹಯೋಗದೊಂದಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಕರ್ನಾಟಕ ಸಾಕ್ಷರತೆ ಯೋಜನೆಯ ಕುರಿತು ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

ಆಗಸ್ಟ್ 6 (ಭಾನುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 1:00 ಗಂಟೆಯ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಂಗ ಅಧಿಕಾರಿಗಳ ಜೊತೆ *ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಪ್ರಾಧಿಕಾರದ ಪಾತ್ರ* ಕುರಿತ ಸಭೆಯನ್ನು ಸಿಟಿ ಸಿವಿಲ್ ಕೋರ್ಟ್ ನ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11:15 ಗಂಟೆಯಿಂದ 12:30 ಗಂಟೆಯವರೆಗೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಜೊತೆ ಕರ್ನಾಟಕ ಲೋಕಾಯುಕ್ತ ಕಛೇರಿಯ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಸಂಜೆ 4:00 ಗಂಟೆಗೆ ಜಿಲ್ಲೆಯ ತಾಲ್ಲೂಕುಗಳಿಗೆ ಭೇಟಿ ನೀಡಲಿದ್ದಾರೆ‌.

ಆಗಸ್ಟ್ 7 (ಸೋಮವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 11:00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಡಳಿತ ಭವನದಲ್ಲಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11:00 ಗಂಟೆಯಿಂದ 1:30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2:30 ಗಂಟೆಯಿಂದ 4:30 ಗಂಟೆಯವರೆಗೆ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ ಅಥವಾ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ನಡೆಸಲಾಗುತ್ತದೆ.

ಆಗಸ್ಟ್ 7 ರ ಬಾಕಿ ಪ್ರಕರಣಗಳನ್ನು ಆಗಸ್ಟ್ 8 ರಂದು ಬೆಳಗ್ಗೆ 10:00 ಗಂಟೆಯಿಂದ ಪ್ರಕರಣಗಳು ಮುಕ್ತಾಯ ಆಗುವವರೆಗೂ ನಡೆಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

3 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

18 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago