ಆಗಸ್ಟ್ 30ಕ್ಕೆ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ: ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಸೂಚನೆ

ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮ ಆಗಸ್ಟ್ 30 ರಂದು ಮೈಸೂರಿನಲ್ಲಿ ವಿಧ್ಯುಕ್ತವಾಗಿ ಚಾಲನೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳ 101 ಕೇಂದ್ರಗಳಲ್ಲಿ ಹಾಗೂ ನಗರ ವ್ಯಾಪ್ತಿಯ 42 ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಎಲ್ಲಾ ಸಿದ್ಧತೆಗಳನ್ನು ಜಿಲ್ಲೆಯ ನೋಡೆಲ್ ಅಧಿಕಾರಿಗಳು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ ಕಾರ್ಯಕ್ರಮದ ಕರಪತ್ರ, ಆಹ್ವಾನ ಪತ್ರಿಕೆಯನ್ನು ಆಗಸ್ಟ್ 27 ರೊಳಗಾಗಿ ಮನೆ ಮನೆಗೆ ಹಂಚಬೇಕು, ಕಾರ್ಯಕ್ರಮದ ದಿನದಂದು ಫಲಾನುಭವಿಗಳಿಗೆ ಗಣ್ಯರಿಗೆ, ಬ್ಯಾಡ್ಜ್ ಗಳನ್ನು ಮುದ್ರಿಸಿ ವಿತರಿಸಲು ಕ್ರಮ ವಹಿಸಿ, ಫಲಾನುಭವಿಗಳು ಹಾಜರಾಗುವಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದರು.

ಆಹ್ವಾನ ಪತ್ರಿಕೆ ಮನೆ ಮನೆಗೆ ವಿತರಿಸಲು ಹಾಗೂ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಲು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೀರು ನಿರ್ವಾಹಕರು, ಸ್ವಸಹಾಯ ಗುಂಪುಗಳ ಸಹಕಾರ ತೆಗೆದುಕೊಳ್ಳಿ ಎಂದರು.

ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮವನ್ನು ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ, ಶಾಲಾ ಕಟ್ಟಡ ಹಾಗೂ ಸಮುದಾಯ ಭವನ,ಛತ್ರಗಳಲ್ಲಿ ಏರ್ಪಡಿಸಬಹುದಾಗಿದ್ದು ಕಾರ್ಯಕ್ರಮಕ್ಕೆ ಅಗತ್ಯವಾದ ಸ್ಥಳ, ಟಿವಿ, ಎಲ್.ಇ.ಡಿ ಪರದೆ, ಲ್ಯಾಪ್ ಟಾಪ್, ಇಂಟರ್ನೆಟ್ ವ್ಯವಸ್ಥೆಯನ್ನು ಸಿದ್ದಪಡಿಸಿ, ಪರಿಶೀಲಿಸಬೇಕು ಎಂದರು.

ನಗರ ವ್ಯಾಪ್ತಿಯ ಕಾರ್ಯಕ್ರಮವನ್ನು ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂಚಾಯ್ತಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಸಲು ಶಿಷ್ಟಾಚಾರದಂತೆ ಸ್ಥಳೀಯ ಜನಪ್ರತಿನಿಧಿಗಳು, ಪಂಚಾಯಿತಿ ಸದಸ್ಯರು, ಸಾರ್ವಜನಿಕರು ಭಾಗವಹಿಸಲು ಕ್ರಮ ಕೈಗೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಸಂಬಂಧಪಟ್ಟ ನೋಡಲ್ ಅಧಿಕಾರಿಗಳು ವಹಿಸಿ ಯಾವುದೇ ಲೋಪದೋಷಗಳು ಉಂಟಾಗದಂತೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

1 hour ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

3 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

16 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

16 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

17 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

23 hours ago