ಆಗಸ್ಟ್ 30ಕ್ಕೆ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ: ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಸೂಚನೆ

ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮ ಆಗಸ್ಟ್ 30 ರಂದು ಮೈಸೂರಿನಲ್ಲಿ ವಿಧ್ಯುಕ್ತವಾಗಿ ಚಾಲನೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳ 101 ಕೇಂದ್ರಗಳಲ್ಲಿ ಹಾಗೂ ನಗರ ವ್ಯಾಪ್ತಿಯ 42 ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಎಲ್ಲಾ ಸಿದ್ಧತೆಗಳನ್ನು ಜಿಲ್ಲೆಯ ನೋಡೆಲ್ ಅಧಿಕಾರಿಗಳು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ ಕಾರ್ಯಕ್ರಮದ ಕರಪತ್ರ, ಆಹ್ವಾನ ಪತ್ರಿಕೆಯನ್ನು ಆಗಸ್ಟ್ 27 ರೊಳಗಾಗಿ ಮನೆ ಮನೆಗೆ ಹಂಚಬೇಕು, ಕಾರ್ಯಕ್ರಮದ ದಿನದಂದು ಫಲಾನುಭವಿಗಳಿಗೆ ಗಣ್ಯರಿಗೆ, ಬ್ಯಾಡ್ಜ್ ಗಳನ್ನು ಮುದ್ರಿಸಿ ವಿತರಿಸಲು ಕ್ರಮ ವಹಿಸಿ, ಫಲಾನುಭವಿಗಳು ಹಾಜರಾಗುವಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದರು.

ಆಹ್ವಾನ ಪತ್ರಿಕೆ ಮನೆ ಮನೆಗೆ ವಿತರಿಸಲು ಹಾಗೂ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಲು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೀರು ನಿರ್ವಾಹಕರು, ಸ್ವಸಹಾಯ ಗುಂಪುಗಳ ಸಹಕಾರ ತೆಗೆದುಕೊಳ್ಳಿ ಎಂದರು.

ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮವನ್ನು ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ, ಶಾಲಾ ಕಟ್ಟಡ ಹಾಗೂ ಸಮುದಾಯ ಭವನ,ಛತ್ರಗಳಲ್ಲಿ ಏರ್ಪಡಿಸಬಹುದಾಗಿದ್ದು ಕಾರ್ಯಕ್ರಮಕ್ಕೆ ಅಗತ್ಯವಾದ ಸ್ಥಳ, ಟಿವಿ, ಎಲ್.ಇ.ಡಿ ಪರದೆ, ಲ್ಯಾಪ್ ಟಾಪ್, ಇಂಟರ್ನೆಟ್ ವ್ಯವಸ್ಥೆಯನ್ನು ಸಿದ್ದಪಡಿಸಿ, ಪರಿಶೀಲಿಸಬೇಕು ಎಂದರು.

ನಗರ ವ್ಯಾಪ್ತಿಯ ಕಾರ್ಯಕ್ರಮವನ್ನು ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂಚಾಯ್ತಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಸಲು ಶಿಷ್ಟಾಚಾರದಂತೆ ಸ್ಥಳೀಯ ಜನಪ್ರತಿನಿಧಿಗಳು, ಪಂಚಾಯಿತಿ ಸದಸ್ಯರು, ಸಾರ್ವಜನಿಕರು ಭಾಗವಹಿಸಲು ಕ್ರಮ ಕೈಗೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಸಂಬಂಧಪಟ್ಟ ನೋಡಲ್ ಅಧಿಕಾರಿಗಳು ವಹಿಸಿ ಯಾವುದೇ ಲೋಪದೋಷಗಳು ಉಂಟಾಗದಂತೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

6 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

8 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

8 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

10 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

11 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

16 hours ago