ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮ ಆಗಸ್ಟ್ 30 ರಂದು ಮೈಸೂರಿನಲ್ಲಿ ವಿಧ್ಯುಕ್ತವಾಗಿ ಚಾಲನೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳ 101 ಕೇಂದ್ರಗಳಲ್ಲಿ ಹಾಗೂ ನಗರ ವ್ಯಾಪ್ತಿಯ 42 ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಎಲ್ಲಾ ಸಿದ್ಧತೆಗಳನ್ನು ಜಿಲ್ಲೆಯ ನೋಡೆಲ್ ಅಧಿಕಾರಿಗಳು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ ಕಾರ್ಯಕ್ರಮದ ಕರಪತ್ರ, ಆಹ್ವಾನ ಪತ್ರಿಕೆಯನ್ನು ಆಗಸ್ಟ್ 27 ರೊಳಗಾಗಿ ಮನೆ ಮನೆಗೆ ಹಂಚಬೇಕು, ಕಾರ್ಯಕ್ರಮದ ದಿನದಂದು ಫಲಾನುಭವಿಗಳಿಗೆ ಗಣ್ಯರಿಗೆ, ಬ್ಯಾಡ್ಜ್ ಗಳನ್ನು ಮುದ್ರಿಸಿ ವಿತರಿಸಲು ಕ್ರಮ ವಹಿಸಿ, ಫಲಾನುಭವಿಗಳು ಹಾಜರಾಗುವಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದರು.
ಆಹ್ವಾನ ಪತ್ರಿಕೆ ಮನೆ ಮನೆಗೆ ವಿತರಿಸಲು ಹಾಗೂ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಲು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೀರು ನಿರ್ವಾಹಕರು, ಸ್ವಸಹಾಯ ಗುಂಪುಗಳ ಸಹಕಾರ ತೆಗೆದುಕೊಳ್ಳಿ ಎಂದರು.
ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮವನ್ನು ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ, ಶಾಲಾ ಕಟ್ಟಡ ಹಾಗೂ ಸಮುದಾಯ ಭವನ,ಛತ್ರಗಳಲ್ಲಿ ಏರ್ಪಡಿಸಬಹುದಾಗಿದ್ದು ಕಾರ್ಯಕ್ರಮಕ್ಕೆ ಅಗತ್ಯವಾದ ಸ್ಥಳ, ಟಿವಿ, ಎಲ್.ಇ.ಡಿ ಪರದೆ, ಲ್ಯಾಪ್ ಟಾಪ್, ಇಂಟರ್ನೆಟ್ ವ್ಯವಸ್ಥೆಯನ್ನು ಸಿದ್ದಪಡಿಸಿ, ಪರಿಶೀಲಿಸಬೇಕು ಎಂದರು.
ನಗರ ವ್ಯಾಪ್ತಿಯ ಕಾರ್ಯಕ್ರಮವನ್ನು ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂಚಾಯ್ತಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಸಲು ಶಿಷ್ಟಾಚಾರದಂತೆ ಸ್ಥಳೀಯ ಜನಪ್ರತಿನಿಧಿಗಳು, ಪಂಚಾಯಿತಿ ಸದಸ್ಯರು, ಸಾರ್ವಜನಿಕರು ಭಾಗವಹಿಸಲು ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಸಂಬಂಧಪಟ್ಟ ನೋಡಲ್ ಅಧಿಕಾರಿಗಳು ವಹಿಸಿ ಯಾವುದೇ ಲೋಪದೋಷಗಳು ಉಂಟಾಗದಂತೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…