Categories: ಹವಾಮಾನ

ಆಗಸ್ಟ್ 30 ರಿಂದ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ

ಕಾಸರಗೋಡು ದ.ಕ ಉಡುಪಿ ಉ.ಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದ.ಕ ಕಾಸರಗೋಡು ಜಿಲ್ಲೆಗಳಾದ್ಯಂತ ಬೆಳಿಗ್ಗೆಯಿಂದ ನಿರಂತರ ಮಳೆಯಾಗುತ್ತಿದ್ದು ಕರಾವಳಿ ತೀರದ ತಾಲ್ಲೂಕುಗಳಲ್ಲಿ ಮಳೆ ಪ್ರಮಾಣ ಅಧಿಕ ವಿರಬಹುದು ಉಡುಪಿ ಉ.ಕ. ದಲ್ಲಿಯೂ ಸಾಧಾರಣ ಮಳೆ ಮುಂದುವರೆಯಬಹುದು ಆದರೇ ಉ.ಕ.ನಿನ್ನೆಗಿಂತ ಮಳೆ ಸ್ವಲ್ಪ ಕಡಿಮೆಯಾಗಬಹುದು. ಕರಾವಳಿ ಜಿಲ್ಲೆಗಳಲ್ಲಿ ನಾಳೆಯೂ ಸಾಧಾರಣ ಮಳೆಯ ಮುನ್ಸೂಚನೆ ಇದೆ. 30 ರಿಂದ ಸೆಪ್ಟೆಂಬರ್ 5 ತನಕ ಸಾಮಾನ್ಯ ಮಳೆ ಮುಂದುವರೆಯಬಹುದು.

ಮಲೆನಾಡಿನ ಕೊಡಗು ಹಾಸನ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಘಟ್ಟಪ್ರದೇಶಗಳಲ್ಲಿ ಅಧಿಕ ಮಳೆಯಾಗಬಹುದು. ಆಗಸ್ಟ್ 30 ರಿಂದ ಮಳೆ ಪ್ರಮಾಣ ಕಡಿಮೆ ಆಗಿ ಸಾಮಾನ್ಯ ಮಳೆ ಮುಂದುವರೆಯಬಹುದು.

ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಎಲ್ಲಾ ಜಿಲ್ಲೆಗಳ ಅಲ್ಲಲ್ಲಿ ತುಂತುರು – ಸಾಮಾನ್ಯ ಮಳೆ ಮುನ್ಸೂಚನೆ ಇದೆ.ಆಗಸ್ಟ್ 30 ರಿಂದ ಮೋಡ ಕಡಿಮೆ ಆಗಿ ಬಿಸಿಲು ಬರಬಹುದು. ಉತ್ತರ ಒಳನಾಡಿನ ಬೀದರ್ ಕಲ್ಬುರ್ಗಿ ಯಾದಗಿರಿ ರಾಯಚೂರು ವಿಜಾಪುರ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ ಧಾರವಾಡ ಗದಗ ಬಾಗಲಕೋಟೆ ಹಾವೇರಿ ಕೊಪ್ಪಳ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಾಳೆಯಿಂದ ಮಳೆ ಕಡಿಮೆಯಾಗಲು ಪ್ರಾರಂಭವಾಗಲಿದೆ.

ಬಂಗಾಳ ಕೊಲ್ಲಿಯ ಲೋ ಪ್ರೆಷರ್ ಒರಿಸ್ಸಾ ಮೂಲಕ ಭೂ ಭಾಗ ಪ್ರವೇಶಿಸಿದ್ದು ಇದರ ಪ್ರಭಾವದ ಗಾಳಿಯು ಛತ್ತಿಸ್ಗಡ ಮಧ್ಯಪ್ರದೇಶ ಮೂಲಕ ಗುಜರಾತ್ ರಾಜಸ್ಥಾನ ತನಕ ಮುಂದುವರೆಯಲಿದೆ. ದಕ್ಷಿಣ ಭಾರತದಲ್ಲಿ 30ರಿಂದ ಮಳೆ ಕಡಿಮೆ ಆಗಬಹುದು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

47 minutes ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

1 hour ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

4 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

8 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

13 hours ago