ಕಾಸರಗೋಡು ದ.ಕ ಉಡುಪಿ ಉ.ಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದ.ಕ ಕಾಸರಗೋಡು ಜಿಲ್ಲೆಗಳಾದ್ಯಂತ ಬೆಳಿಗ್ಗೆಯಿಂದ ನಿರಂತರ ಮಳೆಯಾಗುತ್ತಿದ್ದು ಕರಾವಳಿ ತೀರದ ತಾಲ್ಲೂಕುಗಳಲ್ಲಿ ಮಳೆ ಪ್ರಮಾಣ ಅಧಿಕ ವಿರಬಹುದು ಉಡುಪಿ ಉ.ಕ. ದಲ್ಲಿಯೂ ಸಾಧಾರಣ ಮಳೆ ಮುಂದುವರೆಯಬಹುದು ಆದರೇ ಉ.ಕ.ನಿನ್ನೆಗಿಂತ ಮಳೆ ಸ್ವಲ್ಪ ಕಡಿಮೆಯಾಗಬಹುದು. ಕರಾವಳಿ ಜಿಲ್ಲೆಗಳಲ್ಲಿ ನಾಳೆಯೂ ಸಾಧಾರಣ ಮಳೆಯ ಮುನ್ಸೂಚನೆ ಇದೆ. 30 ರಿಂದ ಸೆಪ್ಟೆಂಬರ್ 5 ತನಕ ಸಾಮಾನ್ಯ ಮಳೆ ಮುಂದುವರೆಯಬಹುದು.
ಮಲೆನಾಡಿನ ಕೊಡಗು ಹಾಸನ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಘಟ್ಟಪ್ರದೇಶಗಳಲ್ಲಿ ಅಧಿಕ ಮಳೆಯಾಗಬಹುದು. ಆಗಸ್ಟ್ 30 ರಿಂದ ಮಳೆ ಪ್ರಮಾಣ ಕಡಿಮೆ ಆಗಿ ಸಾಮಾನ್ಯ ಮಳೆ ಮುಂದುವರೆಯಬಹುದು.
ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಎಲ್ಲಾ ಜಿಲ್ಲೆಗಳ ಅಲ್ಲಲ್ಲಿ ತುಂತುರು – ಸಾಮಾನ್ಯ ಮಳೆ ಮುನ್ಸೂಚನೆ ಇದೆ.ಆಗಸ್ಟ್ 30 ರಿಂದ ಮೋಡ ಕಡಿಮೆ ಆಗಿ ಬಿಸಿಲು ಬರಬಹುದು. ಉತ್ತರ ಒಳನಾಡಿನ ಬೀದರ್ ಕಲ್ಬುರ್ಗಿ ಯಾದಗಿರಿ ರಾಯಚೂರು ವಿಜಾಪುರ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ ಧಾರವಾಡ ಗದಗ ಬಾಗಲಕೋಟೆ ಹಾವೇರಿ ಕೊಪ್ಪಳ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಾಳೆಯಿಂದ ಮಳೆ ಕಡಿಮೆಯಾಗಲು ಪ್ರಾರಂಭವಾಗಲಿದೆ.
ಬಂಗಾಳ ಕೊಲ್ಲಿಯ ಲೋ ಪ್ರೆಷರ್ ಒರಿಸ್ಸಾ ಮೂಲಕ ಭೂ ಭಾಗ ಪ್ರವೇಶಿಸಿದ್ದು ಇದರ ಪ್ರಭಾವದ ಗಾಳಿಯು ಛತ್ತಿಸ್ಗಡ ಮಧ್ಯಪ್ರದೇಶ ಮೂಲಕ ಗುಜರಾತ್ ರಾಜಸ್ಥಾನ ತನಕ ಮುಂದುವರೆಯಲಿದೆ. ದಕ್ಷಿಣ ಭಾರತದಲ್ಲಿ 30ರಿಂದ ಮಳೆ ಕಡಿಮೆ ಆಗಬಹುದು.
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…