ಕಾಸರಗೋಡು ದ.ಕ ಉಡುಪಿ ಉ.ಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದ.ಕ ಕಾಸರಗೋಡು ಜಿಲ್ಲೆಗಳಾದ್ಯಂತ ಬೆಳಿಗ್ಗೆಯಿಂದ ನಿರಂತರ ಮಳೆಯಾಗುತ್ತಿದ್ದು ಕರಾವಳಿ ತೀರದ ತಾಲ್ಲೂಕುಗಳಲ್ಲಿ ಮಳೆ ಪ್ರಮಾಣ ಅಧಿಕ ವಿರಬಹುದು ಉಡುಪಿ ಉ.ಕ. ದಲ್ಲಿಯೂ ಸಾಧಾರಣ ಮಳೆ ಮುಂದುವರೆಯಬಹುದು ಆದರೇ ಉ.ಕ.ನಿನ್ನೆಗಿಂತ ಮಳೆ ಸ್ವಲ್ಪ ಕಡಿಮೆಯಾಗಬಹುದು. ಕರಾವಳಿ ಜಿಲ್ಲೆಗಳಲ್ಲಿ ನಾಳೆಯೂ ಸಾಧಾರಣ ಮಳೆಯ ಮುನ್ಸೂಚನೆ ಇದೆ. 30 ರಿಂದ ಸೆಪ್ಟೆಂಬರ್ 5 ತನಕ ಸಾಮಾನ್ಯ ಮಳೆ ಮುಂದುವರೆಯಬಹುದು.
ಮಲೆನಾಡಿನ ಕೊಡಗು ಹಾಸನ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಘಟ್ಟಪ್ರದೇಶಗಳಲ್ಲಿ ಅಧಿಕ ಮಳೆಯಾಗಬಹುದು. ಆಗಸ್ಟ್ 30 ರಿಂದ ಮಳೆ ಪ್ರಮಾಣ ಕಡಿಮೆ ಆಗಿ ಸಾಮಾನ್ಯ ಮಳೆ ಮುಂದುವರೆಯಬಹುದು.
ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಎಲ್ಲಾ ಜಿಲ್ಲೆಗಳ ಅಲ್ಲಲ್ಲಿ ತುಂತುರು – ಸಾಮಾನ್ಯ ಮಳೆ ಮುನ್ಸೂಚನೆ ಇದೆ.ಆಗಸ್ಟ್ 30 ರಿಂದ ಮೋಡ ಕಡಿಮೆ ಆಗಿ ಬಿಸಿಲು ಬರಬಹುದು. ಉತ್ತರ ಒಳನಾಡಿನ ಬೀದರ್ ಕಲ್ಬುರ್ಗಿ ಯಾದಗಿರಿ ರಾಯಚೂರು ವಿಜಾಪುರ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ ಧಾರವಾಡ ಗದಗ ಬಾಗಲಕೋಟೆ ಹಾವೇರಿ ಕೊಪ್ಪಳ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಾಳೆಯಿಂದ ಮಳೆ ಕಡಿಮೆಯಾಗಲು ಪ್ರಾರಂಭವಾಗಲಿದೆ.
ಬಂಗಾಳ ಕೊಲ್ಲಿಯ ಲೋ ಪ್ರೆಷರ್ ಒರಿಸ್ಸಾ ಮೂಲಕ ಭೂ ಭಾಗ ಪ್ರವೇಶಿಸಿದ್ದು ಇದರ ಪ್ರಭಾವದ ಗಾಳಿಯು ಛತ್ತಿಸ್ಗಡ ಮಧ್ಯಪ್ರದೇಶ ಮೂಲಕ ಗುಜರಾತ್ ರಾಜಸ್ಥಾನ ತನಕ ಮುಂದುವರೆಯಲಿದೆ. ದಕ್ಷಿಣ ಭಾರತದಲ್ಲಿ 30ರಿಂದ ಮಳೆ ಕಡಿಮೆ ಆಗಬಹುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…