ಕಾಸರಗೋಡು ದ.ಕ ಉಡುಪಿ ಉ.ಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದ.ಕ ಕಾಸರಗೋಡು ಜಿಲ್ಲೆಗಳಾದ್ಯಂತ ಬೆಳಿಗ್ಗೆಯಿಂದ ನಿರಂತರ ಮಳೆಯಾಗುತ್ತಿದ್ದು ಕರಾವಳಿ ತೀರದ ತಾಲ್ಲೂಕುಗಳಲ್ಲಿ ಮಳೆ ಪ್ರಮಾಣ ಅಧಿಕ ವಿರಬಹುದು ಉಡುಪಿ ಉ.ಕ. ದಲ್ಲಿಯೂ ಸಾಧಾರಣ ಮಳೆ ಮುಂದುವರೆಯಬಹುದು ಆದರೇ ಉ.ಕ.ನಿನ್ನೆಗಿಂತ ಮಳೆ ಸ್ವಲ್ಪ ಕಡಿಮೆಯಾಗಬಹುದು. ಕರಾವಳಿ ಜಿಲ್ಲೆಗಳಲ್ಲಿ ನಾಳೆಯೂ ಸಾಧಾರಣ ಮಳೆಯ ಮುನ್ಸೂಚನೆ ಇದೆ. 30 ರಿಂದ ಸೆಪ್ಟೆಂಬರ್ 5 ತನಕ ಸಾಮಾನ್ಯ ಮಳೆ ಮುಂದುವರೆಯಬಹುದು.
ಮಲೆನಾಡಿನ ಕೊಡಗು ಹಾಸನ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಘಟ್ಟಪ್ರದೇಶಗಳಲ್ಲಿ ಅಧಿಕ ಮಳೆಯಾಗಬಹುದು. ಆಗಸ್ಟ್ 30 ರಿಂದ ಮಳೆ ಪ್ರಮಾಣ ಕಡಿಮೆ ಆಗಿ ಸಾಮಾನ್ಯ ಮಳೆ ಮುಂದುವರೆಯಬಹುದು.
ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಎಲ್ಲಾ ಜಿಲ್ಲೆಗಳ ಅಲ್ಲಲ್ಲಿ ತುಂತುರು – ಸಾಮಾನ್ಯ ಮಳೆ ಮುನ್ಸೂಚನೆ ಇದೆ.ಆಗಸ್ಟ್ 30 ರಿಂದ ಮೋಡ ಕಡಿಮೆ ಆಗಿ ಬಿಸಿಲು ಬರಬಹುದು. ಉತ್ತರ ಒಳನಾಡಿನ ಬೀದರ್ ಕಲ್ಬುರ್ಗಿ ಯಾದಗಿರಿ ರಾಯಚೂರು ವಿಜಾಪುರ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ ಧಾರವಾಡ ಗದಗ ಬಾಗಲಕೋಟೆ ಹಾವೇರಿ ಕೊಪ್ಪಳ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಾಳೆಯಿಂದ ಮಳೆ ಕಡಿಮೆಯಾಗಲು ಪ್ರಾರಂಭವಾಗಲಿದೆ.
ಬಂಗಾಳ ಕೊಲ್ಲಿಯ ಲೋ ಪ್ರೆಷರ್ ಒರಿಸ್ಸಾ ಮೂಲಕ ಭೂ ಭಾಗ ಪ್ರವೇಶಿಸಿದ್ದು ಇದರ ಪ್ರಭಾವದ ಗಾಳಿಯು ಛತ್ತಿಸ್ಗಡ ಮಧ್ಯಪ್ರದೇಶ ಮೂಲಕ ಗುಜರಾತ್ ರಾಜಸ್ಥಾನ ತನಕ ಮುಂದುವರೆಯಲಿದೆ. ದಕ್ಷಿಣ ಭಾರತದಲ್ಲಿ 30ರಿಂದ ಮಳೆ ಕಡಿಮೆ ಆಗಬಹುದು.
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…