Categories: ಕೋಲಾರ

ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಕೆ ನಾಗರಾಜ್ ಘೋಷಣೆ

ಕೋಲಾರ: ಸಮಾಜದ ಸ್ವಾಸ್ಥ್ಯದ ಜೊತೆಗೆ ಆರೋಗ್ಯ ಶಿಕ್ಷಣ ಕ್ಷೇತ್ರದ ಏಳಿಗೆಗಾಗಿ ಶ್ರಮಿಸುವ ನಿಟ್ಟಿನಲ್ಲಿ ಕೈಜೋಡಿಸುವ ಸಮಾನಮನಸ್ಕರ ಜೊತೆಯಲ್ಲಿ ಜೆಡಿಯು ಪಕ್ಷವನ್ನು ರಾಜ್ಯಾದ್ಯಂತ ಬಲಪಡಿಸುವುದಾಗಿ ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ ಪಾಟೀಲ್ ತಿಳಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇವತ್ತಿನ ರಾಜಕಾರಣವು ದಂಧೆಯಾಗಿದೆ ಕೇವಲ ವ್ಯಾಪಾರದ ಮನಸ್ಥಿತಿಯಾಗಿ ಬಿಟ್ಟಿದೆ ಜನರ ಸಮಸ್ಯೆಗಳಿಗೆ ಒತ್ತು ನೀಡಿಲ್ಲ ಜೆಡಿಯು ಪಕ್ಷವು ಶಿಕ್ಷಣ, ಆರೋಗ್ಯ, ಪರಿಸರ, ಕೃಷಿ ಸೇರಿದಂತೆ ಆಡಳಿತ ವ್ಯವಸ್ಥೆಯ ಸುಧಾರಣೆಗೆ ಅಧ್ಯತೆ ನೀಡಲಾಗುತ್ತಿದೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ಬಗ್ಗೆ ಆರೋಪ ಪ್ರತ್ಯಾರೋಪಕ್ಕೆ ಸೀಮಿತವಾಗಬಾರದು ಬದಲಿ ವ್ಯವಸ್ಥೆಯಾಗಬೇಕು ರಾಜ್ಯದಾದ್ಯಂತ ಮಠಾಧೀಶರು, ಪದವೀಧರರು, ಪ್ರಗತಿಪರ ಚಿಂತಕರು, ಸಾಹಿತಿಗಳೊಂದಿಗೆ ಸಂವಹನದ ಮೂಲಕ ಬದಲಾವಣೆ ತರಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಮುಂದಿನ 2026 ರ ಜೂನ್ ನಲ್ಲಿ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರದ ‌ಚುನಾವಣೆ‌ಯಲ್ಲಿ ಕೋಲಾರ ಜಿಲ್ಲೆಯ ಕಲ್ಲಂಡೂರು ಗ್ರಾಮದ ಡಾ.ಕೆ.ನಾಗರಾಜ್ ಅವರನ್ನು ಜೆಡಿಯು ಪಕ್ಷದಿಂದ ಕಣಕ್ಕಿಳಿಸುತ್ತಿದ್ದು ವ್ಯವಸ್ಥೆಯಲ್ಲಿ‌ನ ಪರಿವರ್ತನೆ‌ಗಾಗಿ ಪದವೀಧರರು ಸುಶಿಕ್ಷಿತರು‌ ಸಹ ವ್ಯವಸ್ಥೆ ವಿರುದ್ಧ ನಿಂತಿದ್ದಾರೆ ಯಾವುದೇ ಪಕ್ಷಕ್ಕೆ ದೋಣಿ ಇಟ್ಟರೂ ಅದೇ ದಿಕ್ಕಿನಲ್ಲಿ ‌ಸಾಗುತ್ತದೆ ಆದರೆ ನಾವು ಹೊಸ ದಿಕ್ಕಿನಲ್ಲಿ ಆಲೋಚನೆಗೆ ನಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು,

ಈಗಾಗಲೇ ಕೋಲಾರ ಜಿಲ್ಲೆಯ ಮುಳಬಾಗಿಲು ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಪೂಜೆ ‌ಸಲ್ಲಿಸಿದ್ದೇವೆ ಪರಿವರ್ತನೆಯೂ ಪ್ರಾರಂಭವಾಗಿದೆ. ಈಗ ಸ್ಚರ್ಣಯುಗ ಆರಂಭವಾಗಬೇಕಿದೆ ಮುಂದೆ ರಾಜ್ಯಾದ್ಯಂತ ವ್ಯಾಪಿಸಲು ಸಾಣೇಹಳ್ಳಿಯಿಂದ ಸಂತೆಬೆನ್ನೂರಿನ ವರಗೆ ನಮ್ಮ ನಡಿಗೆ ಸರ್ವೋದಯ ಕಡೆಗೆ ಪಾದಯಾತ್ರೆ ನಡೆಯುತ್ತಿದೆ ಅದಕ್ಕೆ ಸಮಾನಮನಸ್ಕಾರು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಹಾಗೂ ಜೆಡಿಯು ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ. ಕೆ ನಾಗರಾಜ್ ಮಾತನಾಡಿ ಚುನಾವಣೆ ಇನ್ನೂ ಒಂದೂವರೆ ವರ್ಷವಿದೆ ಈ ಬಾರಿ ಕನಿಷ್ಠ ಮೂರು ಲಕ್ಷ‌ ಮತದಾರರು ಮತದಾನ ಮಾಡಲಿದ್ದು ಐದು ಜಿಲ್ಲೆಯ ಪದವೀಧರ ಮತದಾರರಿಗೆ ಜಾಗೃತಿ‌ ಮೂಡಿಸುವ ಕೆಲಸ ನಡೆಯುತ್ತಿದೆ. ಪಕ್ಷ ಚುನಾವಣೆಗೆ ಮಾತ್ರ ಸೀಮಿತವಲ್ಲ ಜನರ ಬಳಿ‌ ಹೋಗಿ ಮನದಟ್ಟು ಮಾಡುತ್ತೇವೆ ಆರೋಗ್ಯ‌‌ ಮತ್ತು ಶಿಕ್ಷಣ ‌ಉಚಿತವಾಗಬೇಕು ಮತದಾರರ ನೋಂದಣಿ ‌ಹೆಚ್ಚಿಸಬೇಕು ಕೋಲಾರದಿಂದ‌ ಆರಂಭ ಮಾಡಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಕೆ.ಆರ್.ಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಇಂದಿರಾ ಮಾತನಾಡಿ ಪಕ್ಷವು ಡಾ. ನಾಗರಾಜ್ ಅವರಿಗೆ ಬೆಂಬಲ ನೀಡಿದೆ ರಾಜ್ಯದಲ್ಲಿ ರಾಜಕೀಯ ಬದಲಾವಣೆಗಾಗಿ ಹೋರಾಟ ಮಾಡುತ್ತಿದ್ದು ಬದಲಾವಣೆಯೇ ನಮ್ಮ ಗುರಿಯಾಗಿದೆ ಬದಲಾವಣೆ ‌ಅಗುತ್ತದೆ ಎಂಬ ನಂಬಿಕೆ ಇದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಯು ಪಕ್ಷದ ರಾಜ್ಯ ರೈತ ಘಟಕದ ಅಧ್ಯಕ್ಷ ಶ್ರೀನಿವಾಸಗೌಡ, ಮಹಿಳಾ ಘಟಕದ ಸಂಚಾಲಕಿ ಕಲಾವತಿ, ಪಕ್ಷದ ಪ್ರಧಾನ‌ ಕಾರ್ಯದರ್ಶಿಗಳಾದ ರಂಗನಾಥ್ ಲಕ್ಷ್ಮೀ, ಯಶೋಧಾ, ಉಪಾಧ್ಯಕ್ಷ ಪ್ರಭು, ದಾವಣಗೆರೆ ಇಮ್ತಿಯಾಜ್, ಕೆ.ಆರ್.ಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಕೆ ಮಹೇಶ್, ಮುಂತಾದವರು ಇದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

8 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

8 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

10 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

11 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

13 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

19 hours ago