Categories: ಕೋಲಾರ

ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಕೆ ನಾಗರಾಜ್ ಘೋಷಣೆ

ಕೋಲಾರ: ಸಮಾಜದ ಸ್ವಾಸ್ಥ್ಯದ ಜೊತೆಗೆ ಆರೋಗ್ಯ ಶಿಕ್ಷಣ ಕ್ಷೇತ್ರದ ಏಳಿಗೆಗಾಗಿ ಶ್ರಮಿಸುವ ನಿಟ್ಟಿನಲ್ಲಿ ಕೈಜೋಡಿಸುವ ಸಮಾನಮನಸ್ಕರ ಜೊತೆಯಲ್ಲಿ ಜೆಡಿಯು ಪಕ್ಷವನ್ನು ರಾಜ್ಯಾದ್ಯಂತ ಬಲಪಡಿಸುವುದಾಗಿ ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ ಪಾಟೀಲ್ ತಿಳಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇವತ್ತಿನ ರಾಜಕಾರಣವು ದಂಧೆಯಾಗಿದೆ ಕೇವಲ ವ್ಯಾಪಾರದ ಮನಸ್ಥಿತಿಯಾಗಿ ಬಿಟ್ಟಿದೆ ಜನರ ಸಮಸ್ಯೆಗಳಿಗೆ ಒತ್ತು ನೀಡಿಲ್ಲ ಜೆಡಿಯು ಪಕ್ಷವು ಶಿಕ್ಷಣ, ಆರೋಗ್ಯ, ಪರಿಸರ, ಕೃಷಿ ಸೇರಿದಂತೆ ಆಡಳಿತ ವ್ಯವಸ್ಥೆಯ ಸುಧಾರಣೆಗೆ ಅಧ್ಯತೆ ನೀಡಲಾಗುತ್ತಿದೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ಬಗ್ಗೆ ಆರೋಪ ಪ್ರತ್ಯಾರೋಪಕ್ಕೆ ಸೀಮಿತವಾಗಬಾರದು ಬದಲಿ ವ್ಯವಸ್ಥೆಯಾಗಬೇಕು ರಾಜ್ಯದಾದ್ಯಂತ ಮಠಾಧೀಶರು, ಪದವೀಧರರು, ಪ್ರಗತಿಪರ ಚಿಂತಕರು, ಸಾಹಿತಿಗಳೊಂದಿಗೆ ಸಂವಹನದ ಮೂಲಕ ಬದಲಾವಣೆ ತರಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಮುಂದಿನ 2026 ರ ಜೂನ್ ನಲ್ಲಿ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರದ ‌ಚುನಾವಣೆ‌ಯಲ್ಲಿ ಕೋಲಾರ ಜಿಲ್ಲೆಯ ಕಲ್ಲಂಡೂರು ಗ್ರಾಮದ ಡಾ.ಕೆ.ನಾಗರಾಜ್ ಅವರನ್ನು ಜೆಡಿಯು ಪಕ್ಷದಿಂದ ಕಣಕ್ಕಿಳಿಸುತ್ತಿದ್ದು ವ್ಯವಸ್ಥೆಯಲ್ಲಿ‌ನ ಪರಿವರ್ತನೆ‌ಗಾಗಿ ಪದವೀಧರರು ಸುಶಿಕ್ಷಿತರು‌ ಸಹ ವ್ಯವಸ್ಥೆ ವಿರುದ್ಧ ನಿಂತಿದ್ದಾರೆ ಯಾವುದೇ ಪಕ್ಷಕ್ಕೆ ದೋಣಿ ಇಟ್ಟರೂ ಅದೇ ದಿಕ್ಕಿನಲ್ಲಿ ‌ಸಾಗುತ್ತದೆ ಆದರೆ ನಾವು ಹೊಸ ದಿಕ್ಕಿನಲ್ಲಿ ಆಲೋಚನೆಗೆ ನಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು,

ಈಗಾಗಲೇ ಕೋಲಾರ ಜಿಲ್ಲೆಯ ಮುಳಬಾಗಿಲು ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಪೂಜೆ ‌ಸಲ್ಲಿಸಿದ್ದೇವೆ ಪರಿವರ್ತನೆಯೂ ಪ್ರಾರಂಭವಾಗಿದೆ. ಈಗ ಸ್ಚರ್ಣಯುಗ ಆರಂಭವಾಗಬೇಕಿದೆ ಮುಂದೆ ರಾಜ್ಯಾದ್ಯಂತ ವ್ಯಾಪಿಸಲು ಸಾಣೇಹಳ್ಳಿಯಿಂದ ಸಂತೆಬೆನ್ನೂರಿನ ವರಗೆ ನಮ್ಮ ನಡಿಗೆ ಸರ್ವೋದಯ ಕಡೆಗೆ ಪಾದಯಾತ್ರೆ ನಡೆಯುತ್ತಿದೆ ಅದಕ್ಕೆ ಸಮಾನಮನಸ್ಕಾರು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಹಾಗೂ ಜೆಡಿಯು ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ. ಕೆ ನಾಗರಾಜ್ ಮಾತನಾಡಿ ಚುನಾವಣೆ ಇನ್ನೂ ಒಂದೂವರೆ ವರ್ಷವಿದೆ ಈ ಬಾರಿ ಕನಿಷ್ಠ ಮೂರು ಲಕ್ಷ‌ ಮತದಾರರು ಮತದಾನ ಮಾಡಲಿದ್ದು ಐದು ಜಿಲ್ಲೆಯ ಪದವೀಧರ ಮತದಾರರಿಗೆ ಜಾಗೃತಿ‌ ಮೂಡಿಸುವ ಕೆಲಸ ನಡೆಯುತ್ತಿದೆ. ಪಕ್ಷ ಚುನಾವಣೆಗೆ ಮಾತ್ರ ಸೀಮಿತವಲ್ಲ ಜನರ ಬಳಿ‌ ಹೋಗಿ ಮನದಟ್ಟು ಮಾಡುತ್ತೇವೆ ಆರೋಗ್ಯ‌‌ ಮತ್ತು ಶಿಕ್ಷಣ ‌ಉಚಿತವಾಗಬೇಕು ಮತದಾರರ ನೋಂದಣಿ ‌ಹೆಚ್ಚಿಸಬೇಕು ಕೋಲಾರದಿಂದ‌ ಆರಂಭ ಮಾಡಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಕೆ.ಆರ್.ಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಇಂದಿರಾ ಮಾತನಾಡಿ ಪಕ್ಷವು ಡಾ. ನಾಗರಾಜ್ ಅವರಿಗೆ ಬೆಂಬಲ ನೀಡಿದೆ ರಾಜ್ಯದಲ್ಲಿ ರಾಜಕೀಯ ಬದಲಾವಣೆಗಾಗಿ ಹೋರಾಟ ಮಾಡುತ್ತಿದ್ದು ಬದಲಾವಣೆಯೇ ನಮ್ಮ ಗುರಿಯಾಗಿದೆ ಬದಲಾವಣೆ ‌ಅಗುತ್ತದೆ ಎಂಬ ನಂಬಿಕೆ ಇದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಯು ಪಕ್ಷದ ರಾಜ್ಯ ರೈತ ಘಟಕದ ಅಧ್ಯಕ್ಷ ಶ್ರೀನಿವಾಸಗೌಡ, ಮಹಿಳಾ ಘಟಕದ ಸಂಚಾಲಕಿ ಕಲಾವತಿ, ಪಕ್ಷದ ಪ್ರಧಾನ‌ ಕಾರ್ಯದರ್ಶಿಗಳಾದ ರಂಗನಾಥ್ ಲಕ್ಷ್ಮೀ, ಯಶೋಧಾ, ಉಪಾಧ್ಯಕ್ಷ ಪ್ರಭು, ದಾವಣಗೆರೆ ಇಮ್ತಿಯಾಜ್, ಕೆ.ಆರ್.ಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಕೆ ಮಹೇಶ್, ಮುಂತಾದವರು ಇದ್ದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

5 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

7 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

8 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

21 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

22 hours ago