Categories: ಕೋಲಾರ

ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಕೆ ನಾಗರಾಜ್ ಘೋಷಣೆ

ಕೋಲಾರ: ಸಮಾಜದ ಸ್ವಾಸ್ಥ್ಯದ ಜೊತೆಗೆ ಆರೋಗ್ಯ ಶಿಕ್ಷಣ ಕ್ಷೇತ್ರದ ಏಳಿಗೆಗಾಗಿ ಶ್ರಮಿಸುವ ನಿಟ್ಟಿನಲ್ಲಿ ಕೈಜೋಡಿಸುವ ಸಮಾನಮನಸ್ಕರ ಜೊತೆಯಲ್ಲಿ ಜೆಡಿಯು ಪಕ್ಷವನ್ನು ರಾಜ್ಯಾದ್ಯಂತ ಬಲಪಡಿಸುವುದಾಗಿ ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ ಪಾಟೀಲ್ ತಿಳಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇವತ್ತಿನ ರಾಜಕಾರಣವು ದಂಧೆಯಾಗಿದೆ ಕೇವಲ ವ್ಯಾಪಾರದ ಮನಸ್ಥಿತಿಯಾಗಿ ಬಿಟ್ಟಿದೆ ಜನರ ಸಮಸ್ಯೆಗಳಿಗೆ ಒತ್ತು ನೀಡಿಲ್ಲ ಜೆಡಿಯು ಪಕ್ಷವು ಶಿಕ್ಷಣ, ಆರೋಗ್ಯ, ಪರಿಸರ, ಕೃಷಿ ಸೇರಿದಂತೆ ಆಡಳಿತ ವ್ಯವಸ್ಥೆಯ ಸುಧಾರಣೆಗೆ ಅಧ್ಯತೆ ನೀಡಲಾಗುತ್ತಿದೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ಬಗ್ಗೆ ಆರೋಪ ಪ್ರತ್ಯಾರೋಪಕ್ಕೆ ಸೀಮಿತವಾಗಬಾರದು ಬದಲಿ ವ್ಯವಸ್ಥೆಯಾಗಬೇಕು ರಾಜ್ಯದಾದ್ಯಂತ ಮಠಾಧೀಶರು, ಪದವೀಧರರು, ಪ್ರಗತಿಪರ ಚಿಂತಕರು, ಸಾಹಿತಿಗಳೊಂದಿಗೆ ಸಂವಹನದ ಮೂಲಕ ಬದಲಾವಣೆ ತರಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಮುಂದಿನ 2026 ರ ಜೂನ್ ನಲ್ಲಿ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರದ ‌ಚುನಾವಣೆ‌ಯಲ್ಲಿ ಕೋಲಾರ ಜಿಲ್ಲೆಯ ಕಲ್ಲಂಡೂರು ಗ್ರಾಮದ ಡಾ.ಕೆ.ನಾಗರಾಜ್ ಅವರನ್ನು ಜೆಡಿಯು ಪಕ್ಷದಿಂದ ಕಣಕ್ಕಿಳಿಸುತ್ತಿದ್ದು ವ್ಯವಸ್ಥೆಯಲ್ಲಿ‌ನ ಪರಿವರ್ತನೆ‌ಗಾಗಿ ಪದವೀಧರರು ಸುಶಿಕ್ಷಿತರು‌ ಸಹ ವ್ಯವಸ್ಥೆ ವಿರುದ್ಧ ನಿಂತಿದ್ದಾರೆ ಯಾವುದೇ ಪಕ್ಷಕ್ಕೆ ದೋಣಿ ಇಟ್ಟರೂ ಅದೇ ದಿಕ್ಕಿನಲ್ಲಿ ‌ಸಾಗುತ್ತದೆ ಆದರೆ ನಾವು ಹೊಸ ದಿಕ್ಕಿನಲ್ಲಿ ಆಲೋಚನೆಗೆ ನಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು,

ಈಗಾಗಲೇ ಕೋಲಾರ ಜಿಲ್ಲೆಯ ಮುಳಬಾಗಿಲು ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಪೂಜೆ ‌ಸಲ್ಲಿಸಿದ್ದೇವೆ ಪರಿವರ್ತನೆಯೂ ಪ್ರಾರಂಭವಾಗಿದೆ. ಈಗ ಸ್ಚರ್ಣಯುಗ ಆರಂಭವಾಗಬೇಕಿದೆ ಮುಂದೆ ರಾಜ್ಯಾದ್ಯಂತ ವ್ಯಾಪಿಸಲು ಸಾಣೇಹಳ್ಳಿಯಿಂದ ಸಂತೆಬೆನ್ನೂರಿನ ವರಗೆ ನಮ್ಮ ನಡಿಗೆ ಸರ್ವೋದಯ ಕಡೆಗೆ ಪಾದಯಾತ್ರೆ ನಡೆಯುತ್ತಿದೆ ಅದಕ್ಕೆ ಸಮಾನಮನಸ್ಕಾರು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಹಾಗೂ ಜೆಡಿಯು ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ. ಕೆ ನಾಗರಾಜ್ ಮಾತನಾಡಿ ಚುನಾವಣೆ ಇನ್ನೂ ಒಂದೂವರೆ ವರ್ಷವಿದೆ ಈ ಬಾರಿ ಕನಿಷ್ಠ ಮೂರು ಲಕ್ಷ‌ ಮತದಾರರು ಮತದಾನ ಮಾಡಲಿದ್ದು ಐದು ಜಿಲ್ಲೆಯ ಪದವೀಧರ ಮತದಾರರಿಗೆ ಜಾಗೃತಿ‌ ಮೂಡಿಸುವ ಕೆಲಸ ನಡೆಯುತ್ತಿದೆ. ಪಕ್ಷ ಚುನಾವಣೆಗೆ ಮಾತ್ರ ಸೀಮಿತವಲ್ಲ ಜನರ ಬಳಿ‌ ಹೋಗಿ ಮನದಟ್ಟು ಮಾಡುತ್ತೇವೆ ಆರೋಗ್ಯ‌‌ ಮತ್ತು ಶಿಕ್ಷಣ ‌ಉಚಿತವಾಗಬೇಕು ಮತದಾರರ ನೋಂದಣಿ ‌ಹೆಚ್ಚಿಸಬೇಕು ಕೋಲಾರದಿಂದ‌ ಆರಂಭ ಮಾಡಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಕೆ.ಆರ್.ಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಇಂದಿರಾ ಮಾತನಾಡಿ ಪಕ್ಷವು ಡಾ. ನಾಗರಾಜ್ ಅವರಿಗೆ ಬೆಂಬಲ ನೀಡಿದೆ ರಾಜ್ಯದಲ್ಲಿ ರಾಜಕೀಯ ಬದಲಾವಣೆಗಾಗಿ ಹೋರಾಟ ಮಾಡುತ್ತಿದ್ದು ಬದಲಾವಣೆಯೇ ನಮ್ಮ ಗುರಿಯಾಗಿದೆ ಬದಲಾವಣೆ ‌ಅಗುತ್ತದೆ ಎಂಬ ನಂಬಿಕೆ ಇದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಯು ಪಕ್ಷದ ರಾಜ್ಯ ರೈತ ಘಟಕದ ಅಧ್ಯಕ್ಷ ಶ್ರೀನಿವಾಸಗೌಡ, ಮಹಿಳಾ ಘಟಕದ ಸಂಚಾಲಕಿ ಕಲಾವತಿ, ಪಕ್ಷದ ಪ್ರಧಾನ‌ ಕಾರ್ಯದರ್ಶಿಗಳಾದ ರಂಗನಾಥ್ ಲಕ್ಷ್ಮೀ, ಯಶೋಧಾ, ಉಪಾಧ್ಯಕ್ಷ ಪ್ರಭು, ದಾವಣಗೆರೆ ಇಮ್ತಿಯಾಜ್, ಕೆ.ಆರ್.ಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಕೆ ಮಹೇಶ್, ಮುಂತಾದವರು ಇದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

20 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago