ಕೋಲಾರ: ಸಮಾಜದ ಸ್ವಾಸ್ಥ್ಯದ ಜೊತೆಗೆ ಆರೋಗ್ಯ ಶಿಕ್ಷಣ ಕ್ಷೇತ್ರದ ಏಳಿಗೆಗಾಗಿ ಶ್ರಮಿಸುವ ನಿಟ್ಟಿನಲ್ಲಿ ಕೈಜೋಡಿಸುವ ಸಮಾನಮನಸ್ಕರ ಜೊತೆಯಲ್ಲಿ ಜೆಡಿಯು ಪಕ್ಷವನ್ನು ರಾಜ್ಯಾದ್ಯಂತ ಬಲಪಡಿಸುವುದಾಗಿ ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ ಪಾಟೀಲ್ ತಿಳಿಸಿದರು,
ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇವತ್ತಿನ ರಾಜಕಾರಣವು ದಂಧೆಯಾಗಿದೆ ಕೇವಲ ವ್ಯಾಪಾರದ ಮನಸ್ಥಿತಿಯಾಗಿ ಬಿಟ್ಟಿದೆ ಜನರ ಸಮಸ್ಯೆಗಳಿಗೆ ಒತ್ತು ನೀಡಿಲ್ಲ ಜೆಡಿಯು ಪಕ್ಷವು ಶಿಕ್ಷಣ, ಆರೋಗ್ಯ, ಪರಿಸರ, ಕೃಷಿ ಸೇರಿದಂತೆ ಆಡಳಿತ ವ್ಯವಸ್ಥೆಯ ಸುಧಾರಣೆಗೆ ಅಧ್ಯತೆ ನೀಡಲಾಗುತ್ತಿದೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ಬಗ್ಗೆ ಆರೋಪ ಪ್ರತ್ಯಾರೋಪಕ್ಕೆ ಸೀಮಿತವಾಗಬಾರದು ಬದಲಿ ವ್ಯವಸ್ಥೆಯಾಗಬೇಕು ರಾಜ್ಯದಾದ್ಯಂತ ಮಠಾಧೀಶರು, ಪದವೀಧರರು, ಪ್ರಗತಿಪರ ಚಿಂತಕರು, ಸಾಹಿತಿಗಳೊಂದಿಗೆ ಸಂವಹನದ ಮೂಲಕ ಬದಲಾವಣೆ ತರಲು ಮುಂದಾಗಿದ್ದೇವೆ ಎಂದು ತಿಳಿಸಿದರು.
ಮುಂದಿನ 2026 ರ ಜೂನ್ ನಲ್ಲಿ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಕಲ್ಲಂಡೂರು ಗ್ರಾಮದ ಡಾ.ಕೆ.ನಾಗರಾಜ್ ಅವರನ್ನು ಜೆಡಿಯು ಪಕ್ಷದಿಂದ ಕಣಕ್ಕಿಳಿಸುತ್ತಿದ್ದು ವ್ಯವಸ್ಥೆಯಲ್ಲಿನ ಪರಿವರ್ತನೆಗಾಗಿ ಪದವೀಧರರು ಸುಶಿಕ್ಷಿತರು ಸಹ ವ್ಯವಸ್ಥೆ ವಿರುದ್ಧ ನಿಂತಿದ್ದಾರೆ ಯಾವುದೇ ಪಕ್ಷಕ್ಕೆ ದೋಣಿ ಇಟ್ಟರೂ ಅದೇ ದಿಕ್ಕಿನಲ್ಲಿ ಸಾಗುತ್ತದೆ ಆದರೆ ನಾವು ಹೊಸ ದಿಕ್ಕಿನಲ್ಲಿ ಆಲೋಚನೆಗೆ ನಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು,
ಈಗಾಗಲೇ ಕೋಲಾರ ಜಿಲ್ಲೆಯ ಮುಳಬಾಗಿಲು ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದೇವೆ ಪರಿವರ್ತನೆಯೂ ಪ್ರಾರಂಭವಾಗಿದೆ. ಈಗ ಸ್ಚರ್ಣಯುಗ ಆರಂಭವಾಗಬೇಕಿದೆ ಮುಂದೆ ರಾಜ್ಯಾದ್ಯಂತ ವ್ಯಾಪಿಸಲು ಸಾಣೇಹಳ್ಳಿಯಿಂದ ಸಂತೆಬೆನ್ನೂರಿನ ವರಗೆ ನಮ್ಮ ನಡಿಗೆ ಸರ್ವೋದಯ ಕಡೆಗೆ ಪಾದಯಾತ್ರೆ ನಡೆಯುತ್ತಿದೆ ಅದಕ್ಕೆ ಸಮಾನಮನಸ್ಕಾರು ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಹಾಗೂ ಜೆಡಿಯು ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ. ಕೆ ನಾಗರಾಜ್ ಮಾತನಾಡಿ ಚುನಾವಣೆ ಇನ್ನೂ ಒಂದೂವರೆ ವರ್ಷವಿದೆ ಈ ಬಾರಿ ಕನಿಷ್ಠ ಮೂರು ಲಕ್ಷ ಮತದಾರರು ಮತದಾನ ಮಾಡಲಿದ್ದು ಐದು ಜಿಲ್ಲೆಯ ಪದವೀಧರ ಮತದಾರರಿಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಪಕ್ಷ ಚುನಾವಣೆಗೆ ಮಾತ್ರ ಸೀಮಿತವಲ್ಲ ಜನರ ಬಳಿ ಹೋಗಿ ಮನದಟ್ಟು ಮಾಡುತ್ತೇವೆ ಆರೋಗ್ಯ ಮತ್ತು ಶಿಕ್ಷಣ ಉಚಿತವಾಗಬೇಕು ಮತದಾರರ ನೋಂದಣಿ ಹೆಚ್ಚಿಸಬೇಕು ಕೋಲಾರದಿಂದ ಆರಂಭ ಮಾಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಕೆ.ಆರ್.ಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಇಂದಿರಾ ಮಾತನಾಡಿ ಪಕ್ಷವು ಡಾ. ನಾಗರಾಜ್ ಅವರಿಗೆ ಬೆಂಬಲ ನೀಡಿದೆ ರಾಜ್ಯದಲ್ಲಿ ರಾಜಕೀಯ ಬದಲಾವಣೆಗಾಗಿ ಹೋರಾಟ ಮಾಡುತ್ತಿದ್ದು ಬದಲಾವಣೆಯೇ ನಮ್ಮ ಗುರಿಯಾಗಿದೆ ಬದಲಾವಣೆ ಅಗುತ್ತದೆ ಎಂಬ ನಂಬಿಕೆ ಇದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಯು ಪಕ್ಷದ ರಾಜ್ಯ ರೈತ ಘಟಕದ ಅಧ್ಯಕ್ಷ ಶ್ರೀನಿವಾಸಗೌಡ, ಮಹಿಳಾ ಘಟಕದ ಸಂಚಾಲಕಿ ಕಲಾವತಿ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ರಂಗನಾಥ್ ಲಕ್ಷ್ಮೀ, ಯಶೋಧಾ, ಉಪಾಧ್ಯಕ್ಷ ಪ್ರಭು, ದಾವಣಗೆರೆ ಇಮ್ತಿಯಾಜ್, ಕೆ.ಆರ್.ಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಕೆ ಮಹೇಶ್, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…