ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ. ಪರಿಹಾರದ ಚೆಕ್ ವಿತರಿಸಿದರು.
ಬೆಸ್ಕಾಂ ಕಾರ್ಪೋರೇಟ್ ಕಚೇರಿಯಲ್ಲಿ ಸಂತ್ರಸ್ತರ ಕುಟುಂಬದವರನ್ನು ಬುಧವಾರ ಭೇಟಿಯಾದ ಸಚಿವರು, ಅವರಿಗೆ ವಿಮಾ ಸಹಾಯವಾಗಿ ಚೆಕ್ ವಿತರಿಸಿದರು.
ವಿದ್ಯುದಾಘಾತದಲ್ಲಿ ಮೃತಪಟ್ಟ ಗೌರಿಬಿದನೂರು ಉಪವಿಭಾಗದ ಸಹಾಯಕ ಪವರ್ಮ್ಯಾನ್ ಉದಯ್ ಕುಮಾರ್ ಅವರ ಪತ್ನಿ ವಿ. ಕೀರ್ತನಾ, ರಸ್ತೆ ಅಪಘಾತಗಳಲ್ಲಿ ಮೃತರಾದ ಗುಡಿಬಂಡೆ ಉಪವಿಭಾಗದ ಪವರ್ಮ್ಯಾನ್ ಬಿ.ವಿ. ಮಂಜಪ್ಪ ಅವರ ಪತ್ನಿ ದಾಕ್ಷಾಯಿಣಿ ಹಾಗೂ ಚಿಂತಾಮಣಿ ಉಪವಿಭಾಗದ ಪವರ್ ಮ್ಯಾನ್ ಅಮರನಾಥ್ ಅವರ ಪತ್ನಿ ಮುನಿರತ್ನಮ್ಮ ಅವರು ಸಚಿವರಿಂದ ಪರಿಹಾರದ ಚೆಕ್ ಸ್ವೀಕರಿಸಿದರು.
“ನಮ್ಮ ಇಲಾಖೆಯ ಸಿಬ್ಬಂದಿ, ವಿಶೇಷವಾಗಿ ಲೈನ್ಮ್ಯಾನ್ಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಅವರಿಗೆ ಅಗತ್ಯ ವೈಯಕ್ತಿಕ ರಕ್ಷಣಾ ಸಾಧನಗಳನ್ನು ಒದಗಿಸಲಾಗುತ್ತದೆ. ಆದರೂ, ಅನಿರೀಕ್ಷಿತ ಘಟನೆಗಳಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬದವರಿಗೆ ನೆರವಿನ ಹಸ್ತ ಚಾಚಲಾಗುತ್ತದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಸೂಪರ್ ಸ್ಯಾಲರಿ ಅಕೌಂಟ್ ವಿಮಾ ಪ್ರಯೋಜನದಡಿ ಸಂತ್ರಸ್ತರ ಕುಟುಂಬದವರಿಗೆ ಈ ಚೆಕ್ ಹಸ್ತಾಂತರಿಸಲಾಗಿದೆ,” ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ನ ವ್ಯವಸ್ಥಾಕ ನಿರ್ದೇಶಕ ರಾಮ್ ಪ್ರಸಾತ್ ಮನೋಹರ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್. ಶಿವಶಂಕರ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…